‘ವಾಮನ’ ಶೂಟಿಂಗ್ ವೇಳೆ ಧನ್ವೀರ್ ಗೆ ಗಾಯ…ಅಷ್ಟಕ್ಕೂ ಆಗಿದ್ದೇನು?

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ಶೂಟಿಂಗ್ ವೇಳೆ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ. ಶಂಕರ್ ರಾಮನ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ವಾಮನ ಸಿನಿಮಾದ ಫೈಟಿಂಗ್ ದೃಶ್ಯಗಳನ್ನು ಬೆಂಗಳೂರಿನ ಯಲಹಂಕದಲ್ಲಿ ಚಿತ್ರೀಕರಿಸಲಾಗ್ತಿತ್ತು. ಈ ವೇಳೆ ರೋಪ್ ನಿಂದ ಕೆಳಗೆ ಬಿದ್ದ ಧನ್ವೀರ್ ಕೈಗೆ ಪೆಟ್ಟಾಗಿದೆ. ತಕ್ಷಣ ಆಸ್ಪತ್ರೆಗೆ ತೆರಳಿ ಧನ್ವೀರ್ ಚಿಕಿತ್ಸೆ ಪಡೆದುಕೊಂಡಿದ್ದಾರೆ.ವಾಮನ ಶೂಟಿಂಗ್ ವೇಳೆ ಆದ ಅನಾಹುತದಿಂದ ಧನ್ವೀರ್ ಗೆ ಪಿಂಗರ್ ಫ್ಯಾಕ್ಚರ್ ಆಗಿದೆ. ಆಗಿದ್ದರೂ ಸಹ ಧನ್ವೀರ್ ಬ್ರೇಕ್ ಪಡೆದುಕೊಂಡು ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಜಯತೀರ್ಥ ಆಕ್ಷನ್ ಕಟ್ ಹೇಳಿರುವ ಕೈವ ಸಿನಿಮಾದ ಶೂಟಿಂಗ್ ಗೆ ಡೇಟ್ ಫಿಕ್ಸ್ ಆಗಿದೆ. ಹೀಗಾಗಿ ಈ ಚಿತ್ರೀಕರಣಕ್ಕೆ ಯಾವುದೇ ತೊಂದರೆ ಆಗಬಾರದು ಅಂತಾ ಧನ್ವೀರ್ ಏಟಾದರು ವಾಮನ ಚಿತ್ರೀಕರಣ ಮುಂದುವರೆಸಿದ್ದಾರೆ.ಈಕ್ವಿನಾಕ್ಸ್ ಗೋಬಲ್ ಎಂಟರ್ ಟೈನ್ಮೆಂಟ್ ಪ್ರೊಡಕ್ಷನ್ ನಡಿ ಚೇತನ್ ಕುಮಾರ್ ವಾಮನ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತೂಕ ಹೆಚ್ಚಿರುವುದು ಅನಾರೋಗ್ಯಕ್ಕೆ ಕಾರಣ!

Sat Apr 23 , 2022
  ಲಾಕ್‌ಡೌನ್‌, ವರ್ಕ್‌ ಫ್ರಂ ಹೋಮ್ ಕಾರಣದಿಂದಾಗಿ ಅನೇಕರ ದೇಹದ ತೂಕ ಹೆಚ್ಚಾಗಿದೆ. ತೂಕ ಹೆಚ್ಚಿರುವುದು ಅನಾರೋಗ್ಯಕ್ಕೆ ಕಾರಣವಾಗಬಹುದು ಎಂಬ ಭಯ ಕಾಡುತ್ತಿದೆ. ತೂಕ ಇಳಿಸಲು ಜಿಮ್‌, ವರ್ಕೌಟ್‌, ವಾಕಿಂಗ್‌ ಹೀಗೆ ಹಲವು ದೇಹದಂಡನೆಯ ಮಾರ್ಗ ಅನುಸರಿಸುತ್ತಿದ್ದಾರೆ. ಕೆಲವರು ಆಹಾರ ಸೇವನೆಗೆ ಕಡಿವಾಣ ಹಾಕಿ, ತಜ್ಞರು ಸೂಚಿಸುವ ತಿನಿಸುಗಳನ್ನು ಸೇವಿಸುತ್ತಾ, ತೂಕ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಮ್ಮ ಅಡುಗೆಮನೆಯಲ್ಲಿರುವ ಕೆಲ ಆಹಾರ ಪದಾರ್ಥಗಳನ್ನು ನಿರಂತರವಾಗಿ ಸೇವಿಸುವುದರಿಂದ ತೂಕ ಇಳಿಸಬಹುದು […]

Advertisement

Wordpress Social Share Plugin powered by Ultimatelysocial