ವೈದ್ಯಕೀಯ ಉಪಕರಣಗಳ ಖರೀದಿ ಹಗರಣ ಕುರಿತಂತೆ ಮುಂದೆ ಯಾವ ರೀತಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಡಬೇಕು ಎಂಬುದಾಗಿ ಚರ್ಚಿಸುವ ಸಂಬಂಧ ಕಾಂಗ್ರೆಸ್ ಪಕ್ಷದ ಸಭೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆದಿದ್ದಾರೆ. ರಾಜ್ಯದಲ್ಲಿ ಕೊರೊನಾ ಕಿಟ್ ಖರೀದಿ ಭ್ರಷ್ಟಾಚಾರ ದಿನೇ ದಿನೇ ಹೊಸ ತಿರುವುಗಳನ್ನು ಪಡೆಯುತ್ತಿದ್ದು, ಕಾಂಗ್ರೆಸ್ ಪಕ್ಷದ ಸೋಮವಾರದ ಸಭೆ ತೀವ್ರ ಕುತೂಹಲ ಮೂಡಿಸಿದೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಂದಿನ ಹೆಜ್ಜೆ ಏನ್ ಇಡಲಿದೆ ಎಂಬ ಬಗ್ಗೆ ಕುತೂಹಲ ಕೆರಳಿಸಿದೆ. ಅಲ್ಲದೇ ವಿಪಕ್ಷ ನಾಯಕರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೋಮವಾರದ ಸಭೆಯಲ್ಲಿ ಯಾವೆಲ್ಲ ಚರ್ಚೆಯನ್ನು ನಡೆಸಲಿದ್ದಾರೆ ಎಂಬ ಬಗ್ಗೆಯೂ ಕುತೂಹಲ ಮೂಡಿಸಿದೆ.
ಸೋಮವಾರ ಕಾಂಗ್ರೆಸ್ ನಾಯಕರ ಸಭೆ
Please follow and like us: