ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಐ ಐ ಎಸ್ ಸಿ ಅತಿಥಿಗೃಹದಲ್ಲಿ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವ ಬಿ ಸಿ ನಾಗೇಶ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ ಎನ್ ಜೀವರಾಜ ಉಪಸ್ಥಿತರಿದ್ದರು.ಇಂದು ಸಂಜೆ ದೆಹಲಿಗೆ ಹೋಗ್ತಿದ್ದೇನೆ ನಾಳೆ ಜಡ್ಜ್ ಗಳು, ಮುಖ್ಯಮಂತ್ರಿ ಗಳ ಸಮ್ಮೇಳನದಲ್ಲಿ ಭಾಗಿಯಾಗುತ್ತೇನೆ.
ನಂತರ ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಬರ್ತೇನೆ ದೆಹಲಿ ಪ್ರವಾಸದಲ್ಲಿ ಯಾವುದೇ ಕೇಂದ್ರ ಸಚಿವರು ಹಾಗೂ ಪಕ್ಷದ ನಾಯಕರನ್ನು ಭೇಟಿ ಮಾಡುವುದಿಲ್ಲ
ಆದರೆ ಅಮಿತ್ ಷಾ ೩ಕ್ಕೆ ರಾಜ್ಯಕ್ಕೆ ಬರ್ತಾರೆ ಅವಾಗ ಅವರಿಂದ ಒಂದು ಸಮಯ ತಗೊಂಡು, ಸಂಪುಟದ ಬಗ್ಗೆ ತೀರ್ಮಾನ ಮಾಡ್ತೀನಿ ಎಂದ ಸಿಎಂ
ಈಗಾಗಲೇ ಖಾಲಿ ಇರುವ ಸಚಿವ ಸ್ಥಾನ ತುಂಬುವ ಬಗ್ಗೆ ವರಿಷ್ಠರ ಗಮನಕ್ಕೆ ತರಲಾಗಿದೆ ಹೀಗಾಗಿ ಅಮಿತ್ ಷಾ ಬಂದಾಗ ಈ ಬಗ್ಗೆ ಚರ್ಚೆ ಮಾಡುತ್ತೇನೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: