ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ರಾಯಚೂರು: ನಮ್ಮ ಊರಿನಲ್ಲಿ ಪಾನಿಪುರಿ ಮಾರುವರೇ ಗುಜರಾತ್ ನವರು. ಪಾನ್ ಮಸಾಲಾ ಮಾರುವವವರು ಗುಜರಾತ್ ‌ನವರೇ. ಕರ್ನಾಟಕದವರು ಗುಜರಾತ್ ಗೆ ಪಾನಿಪುರಿ, ಜೋಳದ ರೊಟ್ಟಿ ಮಾರಲು ಹೋಗಿದ್ದಾರಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಕಳೆದ 36 ವರ್ಷದಿಂದಿದೆ. ಜನರಿಗೆ ಜೆಡಿಎಸ್ ಪರಿಚಯ ಮಾಡುವ ಅವಶ್ಯಕತೆ ಇಲ್ಲ. ನಮ್ಮ ಕನ್ನಡಿಗರು ಪ್ರಧಾನಿಯಾಗಿದ್ದ ಪಕ್ಷ ನಮ್ಮದು. ಹತ್ತಾರು ನೀರಾವರಿ ಯೋಜನೆಗಳನ್ನು ‌ನಮ್ಮ ದೇವೇಗೌಡರು ಮಾಡಿದ್ದಾರೆ. ನೀರಾವರಿ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡರೆ ನಾವೇ ದೇಶಕ್ಕೆ ನಂಬರ್ ಒನ್‌ ಆಗುತ್ತೇವೆ ಎನ್ನುವ ಮೂಲಕ ಬಿಜೆಪಿ ಗುಜರಾತ್ ‌ಮಾಡಲ್ ಪ್ರಚಾರಕ್ಕೆ ಟಾಂಗ್ ಕೊಟ್ಟರು .

ಕಾಂಗ್ರೆಸ್ ಮತ್ತು ಬಿಜೆಪಿ ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳಿದ್ದಂತೆ. ಇಬ್ಬರ ನಡುವೆ ಕಮಿಷನ್ ವಿಚಾರವಾಗಿ ಜಗಳ ನಡೆಯುತ್ತಿದೆ. ಕಾಂಗ್ರೆಸ್ ಒಡೆದ ಮನೆಯಾಗಿದೆ. ಕಾಂಗ್ರೆಸ್ 20 ಪರ್ಸೆಂಟ್, ಬಿಜೆಪಿ 40 ಪರ್ಸೆಂಟ್ ಕಮಿಷನ್ ವಿಚಾರವಾಗಿ ಅವರ ನಡುವೆಯೇ ಜಗಳ ಶುರುವಾಗಿದೆ ಎಂದರು.

ಯಾವುದೋ ಊರಿನಲ್ಲಿ ಇರುವ ಮಸೀದಿ ವಿಚಾರ ನಮ್ಮ ಊರಿನ ಸಾಹೇಬರಿಗೆ ಯಾಕೆ ಬೇಕು. ಕರ್ನಾಟಕದ ಜನರಿಗೆ ಜ್ಞಾನವಾಪಿ ಸಂಬಂಧವಿಲ್ಲದ ವಿಷಯ. ಯುಪಿಯಲ್ಲಿ ಏನು ನಡೆಯುತ್ತಿದೆಯೊ ನಮಗೇನು ಗೊತ್ತು. 1.36 ಕೋಟಿ ಸಾಹೇಬರು, ಆರುವರೆ ಕೋಟಿ ಜನರು ಒಂದೇ ತಾಯಿಮಕ್ಕಳಂತೆ ಇದ್ದೇವೆ. ನಮಗೆ ನಮ್ಮ ನಾಡು ನಮ್ಮ ಊರು ಮುಖ್ಯ. ಇಲ್ಲಿ ಸರ್ವೇ ಮಾಡಬೇಕಾ ಮಾಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯಮುನೋರ್ಥಿ ಹೆದ್ದಾರಿಯ ಸುರಕ್ಷತಾ ಗೋಡೆ ಕುಸಿತ: ಟ್ರಾಫಿಕ್ ನಲ್ಲಿ ಸಿಲುಕಿದ 10,000 ಮಂದಿ

Sat May 21 , 2022
ಯಮುನೋರ್ಥಿ ಎಕ್ಸ್ ಪ್ರೆಸ್ ಹೆದ್ದಾರಿಯ ಸುರಕ್ಷಿತಾ ಗೋಡೆ ಕುಸಿದ ಪರಿಣಾಮ 10 ಸಾವಿರ ಮಂದಿ ಸಿಲುಕಿರುವ ಘಟನೆ ಉತ್ತರಾಖಂಡ್ ನಲ್ಲಿ ಶನಿವಾರ ಮುಂಜಾನೆ ಸಂಭವಿವಿಸಿದೆ. ಯಮುನೋರ್ಥಿ ಹೆದ್ದಾರಿ ಸುರಕ್ಷಿತಾ ಗೋಡೆ ಕುಸಿದ ಪರಿಣಾಮ ದೇವಸ್ಥಾನಕ್ಕೆ ತಲುಪಬೇಕಿದ್ದ ಹೆದ್ದಾರಿ ಸೇರಿದಂತೆ ವಿವಿಧೆಡೆ 10,000 ಮಂದಿ ಪ್ರಯಾಣಿಕರು ರಸ್ತೆ ಮಧ್ಯೆ ಸಿಲುಕಿದ್ದಾರೆ ಎನ್ನಲಾಗಿದೆ. ಈ ರಸ್ತೆ ಸಂಚಾರ ಮುಕ್ತಗೊಳ್ಳಲು 3 ದಿನವಾಗಲಿದ್ದು, ಜಿಲ್ಲಾಡಳಿತ ಸಂಚಾರ ಮುಕ್ತಗೊಳಿಸಲು ಶ್ರಮ ವಹಿಸುತ್ತಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

Advertisement

Wordpress Social Share Plugin powered by Ultimatelysocial