ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದ್ದು, ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಘಟಕದ ಕಾಲೇಜಿನಲ್ಲಿ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.
ಹಿಜಾಬ್ ಧರಿಸಿ ಶಾಲಾ-ಕಾಲೇಜಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಈಗಾಗಲೇ ತೀರ್ಪು ನೀಡಿದೆ.
ಹೀಗಿದ್ದರೂ 12 ವಿದ್ಯಾರ್ಥಿನಿಯರು ಇಂದೂ ಕೂಡ ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ.
ಕಳೆದ ಶನಿವಾರವೂ ಸಹ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಈ ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಹೋಗದಂತೆ ತಡೆದಿದ್ದರು.ಆದರೆ ಇಂದೂ ಮತ್ತೆ ಹಿಜಾಬ್ ಧರಿಸಿ ಬಂದಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada