ಕರ್ನಾಟಕ ಸರ್ಕಾರದ ನಿಯಮಾವಳಿ ಗಾಳಿಗೆ ತೂರಿ ಮಹಾರಾಷ್ಟ್ರದ ಸಚಿವರೊಂದಿಗೆ ಶ್ರೀಮಂತ ಪಾಟೀಲ ಮರಾಠಿ ಕಾರ್ಯಕ್ರಮ ನಡೆಸುವ ಮೂಲಕ ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿಯಲ್ಲಿ ನಡೆದಿದೆ. ಮಹಾರಾಷ್ಟ್ರ,ಸಚೀವರು ಶಾಸಕ ರೊಂದಿಗೆ ಭಾಗಿಯಾದ ಕರ್ನಾಟಕದ ಜವಳಿ ಮತ್ತು ಅಲ್ಪಸಂಖ್ಯಾತ ಸಚೀವ ಶ್ರೀಮಂತ ಪಾಟೀಲ ಕಾರ್ಯಕ್ರಮದಲ್ಲಿ ಮರಾಠಿ ನಾಮಫಲಕ ರಾರಾಜಿಸಿದ ಘಟನೆ ನಡೆದಿದೆ. ಕೊವಿಡ್ ಪಾಜಿಟಿವ್ ಸಂಖ್ಯೆ ಹೆಚ್ಚುತ್ತಿದ್ದರೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಸರ್ಕಾರದ ನಿಯಮಗಳನ್ನೇ ಗಾಳಿಗೆ ತೂರಿದ್ದಾರೆ.
ಇನ್ನೂ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೂ ಇಲ್ಲದೆ ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾರ್ಯಕ್ರಮ ನಡೆಸಿದ್ದುಗಡಿಭಾಗದಲ್ಲಿ ನಡೆದ ಈ ಕಾರ್ಯಕ್ರಮ ಮರಾಠಿಮಯ ವಾತಾವರಣ ನಿರ್ಮಿಸಿದ್ದು ಶ್ರೀಮಂತ ಪಾಟೀಲ ವಿರುದ್ದ ಕನ್ನಡಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ.