ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಇಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಹಲವಾರು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ‘ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ‘ನವ ಉತ್ತರ ಪ್ರದೇಶದ ನವ ಭಾರತ’ ಹೂಡಿಕೆಗೆ ದೇಶದ ಅತ್ಯುತ್ತಮ ತಾಣವಾಗಿದೆ.
ಗ್ರೌಂಡ್ ಬ್ರೇಕಿಂಗ್ ಸೆರಮನಿ 3.0 ಕಡೆಗೆ ಹೂಡಿಕೆದಾರರ ಉತ್ಸಾಹವು ಇದಕ್ಕೆ ನೇರ ಪುರಾವೆಯಾಗಿದೆ. ಈ ಸಮಾರಂಭವು ‘ಹೊಸ ಉತ್ತರ ಪ್ರದೇಶʼದ ಆಕಾಂಕ್ಷೆಗಳಿಗೆ ಚಾಲನೆ ನೀಡಲಿದೆ’ ಎಂದಿದ್ದಾರೆ.
ಬೆಳಗ್ಗೆ 11 ಗಂಟೆಗೆ ಪ್ರಧಾನಿಯವರು ಲಕ್ನೋದ ಇಂದಿರಾಗಾಂಧಿ ಪ್ರತಿಷ್ಠಾನವನ್ನು ತಲುಪಲಿದ್ದು, ಅಲ್ಲಿ ಯುಪಿ ಹೂಡಿಕೆದಾರರ ಶೃಂಗಸಭೆಯ 3.0 ಕ್ಕೆ ಭೂಮಿಪೂಜೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ. ಮಧ್ಯಾಹ್ನ 1:45 ರ ಸುಮಾರಿಗೆ, ಪ್ರಧಾನಿಯವರು ಕಾನ್ಪುರದ ಪರೌಂಕ್ ಗ್ರಾಮವನ್ನು ತಲುಪಲಿದ್ದು, ಅಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೊಂದಿಗೆ ಪತ್ರಿ ಮಾತಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 2 ಗಂಟೆಗೆ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 2.15ಕ್ಕೆ ಮಿಲನ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.
ನಂತರ ಮಧ್ಯಾಹ್ನ 2:30 ಕ್ಕೆ ಪರೌಂಖ್ ಗ್ರಾಮದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, 80,000 ಕೋಟಿ ರೂ.ಗೂ ಅಧಿಕ ಮೊತ್ತದ 1,406 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಯೋಜನೆಗಳು: ಕೃಷಿ ಮತ್ತು ಅಲೈಡ್, ಐಟಿ ಮತ್ತು ಎಲೆಕ್ಟ್ರಾನಿಕ್ಸ್, ಎಂಎಸ್ಎಂಇ, ಉತ್ಪಾದನೆ, ನವೀಕರಿಸಬಹುದಾದ ಇಂಧನ, ಫಾರ್ಮಾ, ಪ್ರವಾಸೋದ್ಯಮ, ರಕ್ಷಣಾ ಮತ್ತು ಏರೋಸ್ಪೇಸ್, ಕೈಮಗ್ಗ ಮತ್ತು ಜವಳಿ ಮುಂತಾದ ವೈವಿಧ್ಯಮಯ ವಲಯಗಳನ್ನು ಒಳಗೊಂಡಿವೆ. ಸಮಾರಂಭದಲ್ಲಿ ದೇಶದ ಉನ್ನತ ಉದ್ಯಮ ನಾಯಕರು ಭಾಗವಹಿಸಲಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada