ಹೆದ್ದಾರಿಯನ್ನು ೧೦ ದಿನಗಳ ಒಳಗಾಗಿ ದುರಸ್ತಿ ಕಾರ್ಯ ಪ್ರಾರಂಭಿಸುವುದಾಗಿ ಲಕ್ಷ್ಮೇಶ್ವರ ಪೋಲಿಸ್ ಠಾಣೆಯಲ್ಲಿ ನಡೆದ ಎಲ್ಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದ್ದರು.
ಅವರು ಅವರು ರಸ್ತೆ ಕಾಮಗಾರಿ ಆರಂಭವಾಗದೆ ಇರುವುದನ್ನು ಖಂಡಿಸಿ ಶಿಗ್ಲಿ ಕರ್ನಾಟಕ ರಕ್ಷಣಾ ವೇದಿಕೆ, ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ಜಯ ಕರ್ನಾಟಕ ಹಾಗೂ ತಾಲೂಕಿನ ವಿವಿಧ ಸಂಘಟನೆಯ ಬೆಂಬಲದೊಂದಿಗೆ ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ಲಾಸ್ ನಲ್ಲಿ ನಿರಂತರ ಧರಣಿ ಸತ್ಯಾಗ್ರಹವನ್ನು ಸದರಿ ಸಂಘಟನೆಯ ತಾಲೂಕ ಘಟಕದಿಂದ ಹಮ್ಮಿಕೊಳ್ಳಲಾಯಿತು.
ಕರವೇ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಸವರಾಜ ಹೊಗೆಸೊಪ್ಪಿನ ಮಾತನಾಡಿ ಒಂದು ವೇಳೆ ಪ್ರತಿಭಟನೆ ಆರಂಭಿಸಿದ ಎರಡು ದಿನಗಳ ಒಳಗಾಗಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸದೆ ಇದ್ದಲ್ಲಿ ಲಕ್ಷ್ಮೇಶ್ವರದ ಸಾರ್ವಜನಿಕರು ಹಾಗೂ ಕ.ರ.ವೇಯ ಎಲ್ಲಾ ಗ್ರಾಮ ಘಟಕಗಳ ಕಾರ್ಯಕರ್ತರೊಂದಿಗೆ ಸೇರಿ ರಾಜ್ಯ ಹೆದ್ದಾರಿಯನ್ನು ಸಂಪೂರ್ಣ ಬಂದ ಮಾಡಲಾಗುವುದು’ ಎಂದು ಎಚ್ಚರಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada