ಡಿ.18ರಂದು ಜಿಂಕೆ ಚರ್ಮ, ಕೊಂಬು, ಮೂಳೆ ಮಾರಾಟ ಮಾಡುತ್ತಿದ್ದಾಗ ಸೆಂಥಿಲ್ ಬಂಧನ
ಬೆಂಗಳೂರು ಸಿಸಿಬಿ ಪೊಲೀಸರಿಂದ ಬಂಧನ
ಸೆಂಥಿಲ್ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು
ತನಿಖೆ ವೇಳೆ ದಾವಣಗೆರೆಯಿಂದ ಚರ್ಮ ತಂದಿರುವುದಾಗಿ ಬಾಯ್ಬಿಟ್ಟಿದ್ದ ಆರೋಪಿ ಸೆಂಥಿಲ್
ಸೇಂಥಿಲ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು
ಕಾರ್ಯಾಚರಣೆ ವೇಳೆ ಜೀವಂತ ವನ್ಯಪ್ರಾಣಿಗಳು ಸಿಕ್ಕಿರುವ ಮಾಹಿತಿ
ಫಾರ್ಮ್ನಲ್ಲಿದ್ದ ಕಾರ್ಮಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು
ಮುಂದಿನ ಕ್ರಮಕ್ಕೆ ಪ್ರಕರಣವನ್ನು ಸ್ಥಳೀಯ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಸಿಸಿಬಿ
ಸ್ಥಳೀಯ ಪೊಲೀಸರಿಗೆ ಸೆಂಥಿಲ್ನನ್ನು ಹಸ್ತಾಂತರಿಸಿದ ಸಿಸಿಬಿ ಪೊಲೀಸರು
ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮ
ಶೀಘ್ರವೇ ವಿಶೇಷ ತನಿಖಾಧಿಕಾರಿ ನೇಮಿಸಿ ಪ್ರಕರಣದ ತನಿಖೆ ಆರಂಭ
ಪರವಾನಗಿ ಪಡೆದೇ ವನ್ಯಜೀವಿಗಳನ್ನು ಸಾಕಿದ್ದೆವು ಎಸ್ ಎಸ್ ಮಲ್ಲಿಕಾರ್ಜುನ್ ಆಪ್ತರ ಮಾಹಿತಿ
2000ರಿಂದಲೇ ನಮ್ಮ ಫಾರ್ಮ್ ಹೌಸ್ನಲ್ಲಿ ಜಿಂಕೆ ಸಾಕುತ್ತಿದ್ದೆವು
ಇವುಗಳನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿ ಕಾನೂನು ಬಾಹಿರವಾಗಿ ಪ್ರಾಣಿಗಳ ಚರ್ಮ, ಕೊಂಬು ಮಾರಾಟ ಮಾಡಿದ್ದಾನೆ
ಪರವಾನಗಿ ಪಡೆದು ಸಾಕುತ್ತಿದ್ದ ನಾಲ್ಕೈದು ಜಿಂಕೆಗಳು ಮರಿ ಹಾಕಿದ್ದರಿಂದ ಇವುಗಳ ಸಂಖ್ಯೆ ಈಗ ಹೆಚ್ಚಾಗಿದೆ
ಇತ್ತಿಚೆಗೆ ಜನಿಸಿದ ಮರಿಗಳ ಸಾಕುವ ಪರವಾನಗಿ ಪಡೆಯಬೇಕಿದೆ
ಕಾನೂನು ಪ್ರಕಾರವೇ ನಾವು ಸಾಕುತ್ತಿದ್ದೇವೆ ಎಂದು ಎಸ್.ಎಸ್. ಮಲ್ಲಿಕಾರ್ಜುನ್ ಆಪ್ತರಿಂದ ಮಾಹಿತಿ.