ಭಾರತದ ಐದನೇ ಪ್ರಧಾನಿಗಳಾಗಿದ್ದ ಶ್ರೀ ಮಾನ್ ದಿವಂಗತ ಚೌದರಿ ಚರಣ್ ಸಿಂಗ್ ರೈತರ ಪರವಾಗಿ ನಿರಂತರ ಹೋರಾಟ ಮಾಡಿ ರೈತರ ಬೆನ್ನಿಗೆ ನಿಂತಿದ್ದ ಕಾರಣ ಅವರ ಜನ್ಮದಿನದ ಪ್ರಯುಕ್ತ ಪ್ರತಿ ವರ್ಷ ಡಿಸೆಂಬರ್ 23 ರಂದು ರೈತ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತಿದ್ದು ಇಂದು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಹೊರವಲಯದ ಪಣಸಮಾಕನಹಳ್ಳಿ ಗ್ರಾಮದಲ್ಲಿ ರೈತ ದಿನಾಚರಣೆಯನ್ನು ಆಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ರೈತರು, ರೈತ ಸಂಘಟನೆ ಮುಖಂಡರು, ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಬಾಗವಹಿಸಿ ದಿವಂಗತ ಚೌದರಿ ಚರಣ್ ಸಿಂಗ್ ರವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಗಿಡಕ್ಕೆ ನೀರು ಬಿಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ನೆರವೇರಿಸಲಾಯಿತು ನಂತರ ಮಾತನಾಡಿದ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಗಳು ಎಲ್ಲಾ ರೈತರಿಗೆ ರೈತ ದಿನಾಚರಣೆಯ ಶುಭಾಶಯಗಳನ್ನು ಕೋರಿ ತಮ್ಮ ತಮ್ಮ ಇಲಾಖೆಗಳಿಂದ ರೈತರಿಗೆ ಸಿಗುವ ಸೌಲಭ್ಯಗಳ ಕುರಿತು ರೈತರಿಗೆ ವಿವರಣೆ ನೀಡಿದರು.