ಬಿಸಿಸಿಐ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಹೊಸ ವರ್ಷಕ್ಕೆ ಭರ್ಜರಿ ಉಡುಗೊರೆ ನೀಡಲಿದೆ. ಹಾರ್ದಿಕ್ ಪಾಂಡ್ಯ ಭಾರತ ಟಿ20 ತಂಡದ ನಾಯಕತ್ವ ವಹಿಸಿಕೊಳ್ಳಲು ಸಜ್ಜಾಗಿದ್ದು, ಡಿಸೆಂಬರ್ 27ರಂದು ಅಧಿಕೃತವಾಗಿ ಘೋಷಣೆ ಮಾಡಲಿದೆ.ವಜಾಗೊಂಡಿರುವ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿ ಮಂಗಳವಾರ ಶ್ರೀಲಂಕಾ ವಿರುದ್ಧ ಟಿ20 ಮತ್ತು ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲು ಸಿದ್ಧವಾಗಿದೆ.ರೋಹಿತ್ ಶರ್ಮಾ ಟಿ20 ನಾಯಕತ್ವದಿಂದ ಕೆಳಗಿಳಿಯಲಿದ್ದು, ಹಾರ್ದಿಕ್ ಪಾಂಡ್ಯ ಟಿ20 ತಂಡದ ನಾಯಕನಾಗಲಿದ್ದಾರೆ. 2024ರ ವರೆಗೆ ಅವರು ಭಾರತ ಟಿ20 ತಂಡವನ್ನು ಮುನ್ನಡೆಸಲಿದ್ದಾರೆ.”ಭಾರತ ಟಿ20 ತಂಡಕ್ಕೆ ಹೊಸ ನಾಯಕನಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಘೋಷಣೆ ಮಾಡುವ ಸಮಯ ಬಂದಿದೆ. ಪ್ರಸ್ತುತ ತಂಡದಲ್ಲಿರುವ ರೋಹಿತ್ ಶರ್ಮಾ ಸೇರಿದಂತೆ ಹಲವು ಆಟಗಾರರು 2024 ರವರೆಗೆ ತಂಡದಲ್ಲಿ ಇರುವ ಸಾಧ್ಯತೆ ಕಡಿಮೆ ಇದೆ. ಭಾರತೀಯ ಟಿ20 ತಂಡದ ಭವಿಷ್ಯದ ದೃಷ್ಟಿಯಿಂದ ಹಾರ್ದಿಕ್ ಪಾಂಡ್ಯ ಅವರನ್ನು ಟಿ20 ತಂಡಕ್ಕೆ ನಾಯಕರನ್ನಾಗಿ ನೇಮಿಸಲಾಗುವುದು ಎಂದು” ಬಿಸಿಸಿಐನ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.ಹಿರಿಯ ಆಟಗಾರರಿಗೆ ವಿಶ್ರಾಂತಿಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಹಿರಿಯ ಆಟಗಾರರು ವಿಶ್ರಾಂತಿ ಪಡೆಯಲಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ವಿಶ್ರಾಂತಿ ತೆಗೆದುಕೊಳ್ಳಲಿದ್ದು, ಮದುವೆಯ ಕಾರಣ ಕೆಎಲ್ ರಾಹುಲ್ ಸರಣಿಯಿಂದ ಹೊರಗುಳಿಯಲಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…