ದೇವರು ವರ ಕೊಡಲ್ಲ, ಶಾಪವೂ ಕೊಡಲ್ಲ. ಆದರೆ ಅವಕಾಶ ಕೊಡುತ್ತಾನೆ. ಅದರಂತೆ ಕಾಂಗ್ರೆಸ್ ಆಯ್ಕೆ ಒಂದು ಅವಕಾಶ ಇದ್ದಂತೆ, ಅದನ್ನು ರಾಜ್ಯದ ಸದುಪಯೋಗ ಮಾಡಿಕೊಳ್ಳಬೇಕು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.ನಗರದ ದರ್ಬಾರ್ ಶಾಲಾ ಮೈದಾನದಲ್ಲಿ ಕಾಂಗ್ರೆಸ್ನಿಂದ ಶುಕ್ರವಾರ ಆಯೋಜಿಸಿದ್ದ ಕೃಷ್ಣಾ ಜಲಾಂದೋಲನ ಸಮಾವೇಶದಲ್ಲಿ ಮಾತನಾಡಿ, ನಮ್ಮ ಸರ್ವೇ ತಂಡ ವಿಜಯಪುರ ಜಿಲ್ಲೆಯಲ್ಲಿ ಎಂಟರಲ್ಲಿ ಆರು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿತ್ತು. ಆದರೆ ಇಲ್ಲಿ ಸೇರಿದ ಜನರನ್ನು ನೋಡಿದರೆ ಎಂಟಕ್ಕೆ ಎಂಟು ಸ್ಥಾನ ಗೆಲ್ಲುವ ವಿಶ್ವಾಸ ಮೂಡಿದೆ ಎಂದು ಹೇಳಿದರು.ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಜನರಿಗಾದ ಅನ್ಯಾಯವನ್ನು ಸರಿಪಡಿಸಲು ವಿಜಯಪುರಕ್ಕೆ ಬಂದಿದ್ದೇವೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ, ನನೆಗುದಿಗೆ ಬಿದ್ದ ಯೋಜನೆಗಳನ್ನು ಪೂರ್ಣಗೊಳಿಸುತ್ತೇವೆ. ರೈತನಿಗೆ ಸಂಬಳ ಇಲ್ಲ, ಪಿಂಚಣಿ ಇಲ್ಲ, ಅದರಂತೆ ನಿವೃತ್ತಿ ಸಹ ಇಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷ ಅನ್ನದಾತನ ಪರವಾಗಿ ನಿಲ್ಲಲು ಪ್ರತಿಜ್ಞೆ ಮಾಡಲು ಇಲ್ಲಿಗೆ ಬಂದಿದೆ. ನುಡಿದಂತೆ ನಡೆದು, ನಿಮ್ಮ ಏಳಿಗೆಗಾಗಿ ದುಡಿಯುತ್ತೇವೆ ಎಂದು ಭರವಸೆ ನೀಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada