ನವದೆಹಲಿ: ಮೀಸಲಾತಿಯ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಅಗತ್ಯವಿರುವವರಿಗೆ ಮಾತ್ರ ಮೀಸಲಾತಿಯ ಅನುಕೂಲಗಳು ದೊರೆಯುವಂತೆ ಮಾಡಬೇಕು. ಮೀಸಲಾತಿ ಪಟ್ಟಿಯನ್ನು ಪರೀಕ್ಷಿಸಬೇಕು. ಇದು ಸರ್ಕಾರದ ಕರ್ತವ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಅರುಣ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಆದೇಶ ನೀಡಿದೆ. ಮೀಸಲಾತಿಯ ಫಲಾನುಭವಿಗಳಾಗಲು ಪರಿಶಿಷ್ಟಜಾತಿ ಮತ್ತು ಪಂಗಡಗಳಲ್ಲಿ ಹಲವು ತೊಡಕುಗಳಿವೆ. ಇದಲ್ಲದೇ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಮುಂದುವರಿದ ವರ್ಗಗಳಿವೆ. ಆದರೆ ಈ ಜಾತಿ ಮತ್ತು ಪಂಗಡಗಳಲ್ಲಿ ಕೆಲವು ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣದ ಕಾರ್ಯಗಳಿಂದ ವಂಚಿತವಾಗಿವೆ. ಹೀಗೆ ವಂಚಿತವಾದ ವರ್ಗಗಳಿಗೆ ಮೀಸಲಾತಿಯ ಅನುಕೂಲಗಳು ದೊರೆಯುತ್ತಿಲ್ಲ ಎಂದು ಪೀಠವು ಅಭಿಪ್ರಾಯಪಟ್ಟಿದೆ.
ಮೀಸಲಾತಿ ಪಟ್ಟಿಯನ್ನು ಪರೀಕ್ಷಿಸಿ: ಸುಪ್ರೀಂ ಕೋರ್ಟ್
Please follow and like us: