ಬೆಂಗಳೂರು: ಅನೇಕ ಸವಾಲು ಮತ್ತು ಜಟಿಲತೆಗಳಿಂದ ಹೊರಬರುವಲ್ಲಿ ಅಂತರಂಗ ಶುದ್ಧಿಯಿಂದ ಕೂಡಿದ ದೈವಭಕ್ತಿಗೆ ಮಹತ್ವದ ಪಾತ್ರ ಇದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಮಲ್ಲೇಶ್ವರಂ ಕ್ಷೇತ್ರದ ವ್ಯಾಪ್ತಿಯ ಸುಬೇದಾರ್ ಪಾಳ್ಯದಲ್ಲಿ ಇರುವ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಚೆನ್ನೈನ ಓಂಶಕ್ತಿ ದೇವಸ್ಥಾನಕ್ಕೆ ತೆರಳುವ ಮಹಿಳೆಯರಿಗೆ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮನುಷ್ಯನ ಬದುಕು ಯಾವಾಗಲೂ ಸವಾಲಿನಿಂದ ಕೂಡಿರುತ್ತದೆ. ಕೆಲವೊಮ್ಮೆ ನಮಗೆ ಆತ್ಮವಿಶ್ವಾಸದ ಕೊರತೆ ಕಾಡುತ್ತದೆ. ಅಂತಹ ಸಂದರ್ಭಗಳಲ್ಲಿ ಭಕ್ತಿಯು ನಮ್ಮ ಕೈ ಹಿಡಿಯುತ್ತದೆ ಎಂದರು.
ನಂಬಿಕೆಗಳೇ ಬದುಕಿನ ಆಧಾರಸ್ತಂಭಗಳಾಗಿವೆ. ಆದ್ದರಿಂದ ಪುರುಷಪ್ರಯತ್ನ, ಅದೃಷ್ಟ ಇವುಗಳ ಜತೆಗೆ ಲೋಕಹಿತವನ್ನು ಬಯಸುವ ದೈವಿಕ ಶ್ರದ್ಧೆಯೂ ನಮಗೆ ಬೇಕಾಗುತ್ತದೆ. ಇದೇ ನಮ್ಮ ನೆಮ್ಮದಿಯ ಮೂಲವಾಗಿದೆ ಎಂದು ಅವರು ನುಡಿದರು.
ಮನುಷ್ಯ ವಿಜ್ಞಾನ, ತಂತ್ರಜ್ಞಾನ, ವೈಚಾರಿಕತೆ ಇತ್ಯಾದಿಗಳಲ್ಲಿ ಎಷ್ಟೇ ಮುಂದುವರಿದಿರಬಹುದು. ಆದರೆ, ಭಕ್ತಿಯ ಪ್ರಭಾವ ನಮ್ಮ ಸಮಾಜ ಮತ್ತು ಸಂಸ್ಕೃತಿಗಳಲ್ಲಿ ಹಾಸು ಹೊಕ್ಕಾಗಿದೆ. ಇದು ಆತ್ಮಾವಲೋಕನಕ್ಕೆ ಪ್ರೇರಣೆ ನೀಡುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.
ಪಾಲಿಕೆ ಮಾಜಿ ಸದಸ್ಯ ಜಯಪಾಲ್ ಸೇರಿದಂತೆ ಇತರರು ಇದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de….