ಗುರುವಾರ ತಿಂಥಿಣಿ ಬ್ರಿಡ್ಜ್ ನಲ್ಲಿ ಹಾಲುಮತ ಸಂಸ್ಕೃತಿ ವೈಭವದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿ.ಎಲ್.ಪಿ ನಾಯಕರಾದ ಸಿದ್ದರಾಮಯ್ಯ ಅವರಿಗೆ ತಿಂಥಿಣಿ ಬ್ರಿಡ್ಜ್ ಬಳಿ ಬಂಡ್ಯಾಳ ಕ್ರಾಸ್ ನಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಕೆಪಿಸಿಸಿ ಮಾಜಿ ರಾಜ್ಯ ಕಾರ್ಯದರ್ಶಿ ಕೆ.ಕರಿಯಪ್ಪನ ವರಿಗೆ ಕಾಂಗ್ರೇಸ್ ಟಿಕೇಟ್ ನೀಡುವಂತೆ ಒತ್ತಾಯಿಸಿ ಕೆ.ಕರಿಯಪ್ಪ ಅಭಿಮಾನಿಗಳು, ಹಿತೈಷಿಗಳು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿಗೆ ಮುತ್ತಿಗೆ ಹಾಕಿ ಮನವಿ ಮಾಡಿಕೊಂಡರು ಸುಮಾರು 70 ಕ್ರಸರ್, ಕಾರುಗಳಲ್ಲಿ ಸ್ವಯಂ ಪ್ರೇರಿತವಾಗಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೇಟ್ ನ್ನು ಹಿಂದುಳಿದ ವರ್ಗಗಳ ನಾಯಕರಾದ ಕೆ.ಕರಿಯಪ್ಪ ಗೆ ನೀಡಬೇಕೆಂದು ಒತ್ತಾಯಿಸಿ ಭಾವಚಿತ್ರ ಹಿಡಿದು ಘೋಷಣೆ ಕೂಗಿದರು.
https://play.google.com/store/apps/details?id=com.speed.newskannada