ಕೋವಿಡ್-19: ಭಾರತದಲ್ಲಿ 24 ಗಂಟೆಗಳಲ್ಲಿ 128 ಹೊಸ ಪ್ರಕರಣಗಳು.

ಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 128 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,998ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 128 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,998ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,81,361ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಂದು ಸಾವು ಸೇರಿ ಈವರೆಗೆ 5,30,728 ಮಂದಿ ಸಾವಿಗೀಡಾಗಿದ್ದಾರೆ ಎಂದು ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿಯಲ್ಲಿ ತಿಳಿದುಬಂದಿದೆ ದೈನಂದಿನ ಪಾಸಿಟಿವಿಟಿ ದರ ಶೇ 0.07ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ ಶೇ 0.09ರಷ್ಟಿದೆ. ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ. ದೇಶದಲ್ಲಿ ಈವರೆಗೆ 4,41,48,645 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಚಿವಾಲಯದ ವೆಬ್ಸೈಟ್ನಲ್ಲಿನ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.18ಕ್ಕೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಒಬ್ಬ ಟಿಎಂಸಿ ಕಾರ್ಯಕರ್ತ ಜನಸಾಮಾನ್ಯರಿಗೆ ಹೊಡೆದ ಎಂದರೆ ಕಣ್ಣೀರು ಹಾಕಬೇಡಿ.

Wed Jan 18 , 2023
ಕೋಲ್ಕತಾ: ಒಬ್ಬ ಟಿಎಂಸಿ ಕಾರ್ಯಕರ್ತ ನಿಮಗೆ (ಜನಸಾಮಾನ್ಯರಿಗೆ) ಹೊಡೆದ ಎಂದರೆ ಕಣ್ಣೀರು ಹಾಕಬೇಡಿ. ಆತನನ್ನು ಕಂಬಕ್ಕೆ ಕಟ್ಟಿ4-5 ಸಲ ಕಪಾಳಕ್ಕೆ ಹೊಡೆಯಿರಿ ಎಂದು ಬಿಜೆಪಿ ಸಂಸದೆ ಲಾಕೆಟ್‌ ಚಟರ್ಜಿ ಕರೆ ನೀಡಿದ್ದಾರೆ. ಇದು ಬಂಗಾಳ ರಾಜಕೀಯದಲ್ಲಿ ಭಾರಿ ವಿವಾದ ಸೃಷ್ಟಿಸಿದೆ. ಇತ್ತೀಚೆಗೆ ಬಿಜೆಪಿ ಕಾರ್ಯಕರ್ತ ಸಾಗರ್‌ ಬಿಸ್ವಾಸ್‌ ಎಂಬಾತ ‘ದೀದಿ ಸುರಕ್ಷಾ ಕವಚ’ ಎಂಬ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ರಸ್ತೆ ಸಮಸ್ಯೆ ಬಗ್ಗೆ ಕೇಳಿದಾಗ, ಆತನಿಗೆ ಟಿಎಂಸಿ ಕಾರ್ಯಕರ್ತನೊಬ್ಬ ಕಪಾಳಕ್ಕೆ ಹೊಡೆದಿದ್ದ. ಈ […]

Advertisement

Wordpress Social Share Plugin powered by Ultimatelysocial