ಗೆಳೆಯ ಉದ್ಯಮಿ ವಿಶಾಲ್ ಶಿವಪ್ಪ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶುಭ್ರ ಅಯ್ಯಪ್ಪ.

ಸ್ಯಾಂಡಲ್ ವುಡ್ ನಲ್ಲೀಗ ಗಟ್ಟಿಮೇಳ ಸಂಭ್ರಮ. ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ಗೆ ‘ವಜ್ರಕಾಯ’ ದಲ್ಲಿ ನಾಯಕಿಯಾಗುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕೊಡಗು ಮೂಲದ ನಟಿ ಶುಭ್ರ ಅಯ್ಯಪ್ಪ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ಉದ್ಯಮಿ ವಿಶಾಲ್ ಶಿವಪ್ಪ ಜೊತೆ ಸಪ್ತಪದಿ ತುಳಿದಿದ್ದಾರೆ. ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲೀಗ ಗಟ್ಟಿಮೇಳ ಸಂಭ್ರಮ. ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ಗೆ ‘ವಜ್ರಕಾಯ’ ದಲ್ಲಿ ನಾಯಕಿಯಾಗುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕೊಡಗು ಮೂಲದ ನಟಿ ಶುಭ್ರ ಅಯ್ಯಪ್ಪ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ಉದ್ಯಮಿ ವಿಶಾಲ್ ಶಿವಪ್ಪ ಜೊತೆ ಸಪ್ತಪದಿ ತುಳಿದಿದ್ದಾರೆ.
ಕಳೆದ ತಿಂಗಳು ಅದಿತಿ ಪ್ರಭುದೇವ ಹಸೆಮಣೆ ಏರಿದ್ದ ಬೆನ್ನಲ್ಲೇ ಇದೀಗ ನಟಿ ಶುಭ್ರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಾಕಷ್ಟು ವರ್ಷಗಳ ಡೇಟಿಂಗ್ ನಂತರ ಗುರುಹಿರಿಯರ ಒಪ್ಪಿಗೆಯ ಮೇರೆಗೆ ಶುಭ್ರ ಮತ್ತು ವಿಶಾಲ್ ಮದುವೆಯಾಗಿದ್ದಾರೆ. ಉದ್ಯಮಿ ವಿಶಾಲ್ ಮತ್ತು ಶುಭ್ರ ಮದುವೆ ನಿನ್ನೆ ಕೂರ್ಗ್ನ `ದೊಡ್ಮನೆ’   ಎಂಬ 150 ವರ್ಷದ ಹಳೆಯ ಮನೆಯಲ್ಲಿ ಮದುವೆಯಾಗಿದ್ದಾರೆ. ಈ ಮದುವೆಗೆ ಕುಟುಂಬಸ್ಥರು, ಆಪ್ತರು ಅಷ್ಟೇ ಭಾಗವಹಿಸಿದ್ದರು. ನಾಳೆ ಮತ್ತು 21ರಂದು ಸಿನಿಮಾ ರಂಗದ ಸ್ನೇಹಿತರಿಗೆ ಆಪ್ತರಿಗೆ ಮೈಸೂರಿನಲ್ಲಿ ಆರತಕ್ಷತೆ ಇರಲಿದೆ. ಶುಭ್ರ ಮದುವೆಯಲ್ಲಿ ಕೊಡಗು ಮೂಲದ ನಟಿ ನಿಧಿ ಸುಬ್ಬಯ್ಯ, `ಮುಂಗಾರು ಮಳೆ  ಖ್ಯಾತಿಯ ನೇಹಾ ಶೆಟ್ಟಿ ಭಾಗವಹಿಸಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎರಡು ಧೋಣಿಗಳ ಮಧ್ಯೆ ಡಿಕ್ಕಿ.

Thu Jan 19 , 2023
ತಮಿಳಿನ ಖ್ಯಾತ ನಟ ವಿಜಯ್ ಆಂಟನಿ ಶೂಟಿಂಗ್ ವೇಳೆ ಸಂಭವಿಸಿದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸಮುದ್ರದ ಮಧ್ಯದಲ್ಲಿ ಫೈಟಿಂಗ್​ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ವಿಜಯ್ ನಟನೆಯ ‘ಪಿಚ್ಚೈಕಾರನ್ 2’ ಸಿನಿಮಾವನ್ನು ಮಲೇಷ್ಯಾದಲ್ಲಿ ಶೂಟಿಂಗ್ ಮಾಡುತ್ತಿದ್ದರು. ದೋಣಿಯೊಂದರಲ್ಲಿ ಫೈಟಿಂಗ್ ಸೀನ್​​ಗಳನ್ನು ಕ್ಯಾಮರದಲ್ಲಿ ಸೆರೆ ಹಿಡಿಯಲಾಗುತ್ತಿತ್ತು. ಫೈಟಿಂಗ್​​ ಮಾಡುತ್ತಿದ್ದ ದೋಣಿಯು ನಿಯಂತ್ರಣ ತಪ್ಪಿ ಮತ್ತೊಂದು ದೋಣಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ವಿಜಯ್ ಆಂಟನಿ ತೀವ್ರವಾಗಿ ಗಾಯಗೊಂಡಿದ್ದಾರೆ. […]

Advertisement

Wordpress Social Share Plugin powered by Ultimatelysocial