ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಕರ್ನಾಟಕದ ಪ್ರಮುಖ ರಾಜಕಾರಣಿಯೊಬ್ಬರಿಗೆ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಬರೋಬ್ಬರಿ 500 ಕೋಟಿ ರೂಪಾಯಿ ಆಫರ್ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
‘ಸರ್ವೇ ಕದ್ದಿದ್ದಾರೆ..’
ತೆಲಂಗಾಣದ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಈ ಗಂಭೀರ ಆರೋಪವನ್ನು ಮಾಡಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು 500 ಕೋಟಿ ರೂಪಾಯಿ ಆಫರ್ ನೀಡಿದ್ದಾರೆ.
ಇದಕ್ಕೆ ಸಂಬಂಧಪಟ್ಟ ದಾಖಲೆಗಳು ತಮ್ಮ ಬಳಿ ಇವೆ. ತೆಲಂಗಾಣದ ತಮ್ಮ ಫಾರ್ಮ್ ಹೌಸ್ನಲ್ಲಿ ಈ ಮಾತುಕತೆ ನಡೆದಿದೆ ಅಂತಾ ಆರೋಪಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 130 ಕ್ಷೇತ್ರ ಗೆಲ್ಲಲಿದೆ. ತೆಲಂಗಾಣದ ಕಾಂಗ್ರೆಸ್ ಚುನಾವಣಾ ಕಾರ್ಯತಂತ್ರ ನಿಪುಣ ಸುನೀಲ್ ಕನಗೋಳ್ ಕಚೇರಿ ಮೇಲೆ ದಾಳಿಯಾಗಿದೆ. ತೆಲಂಗಾಣ ಪೊಲೀಸರು ದಾಳಿ ನಡೆಸಿ ಸರ್ವೇ ವರದಿ ಪಡೆದಿದ್ದಾರೆ. ಸರ್ವೇ ವರದಿ ಬೆನ್ನಲ್ಲೇ ಕೆಸಿಆರ್ ಕರ್ನಾಟಕದಲ್ಲಿ 30 ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿಸಲು ಸಂಚು ರೂಪಿಸಿದ್ದಾರೆ ಎಂದು ಗುಡುಗಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು, ದುರ್ಬಲಗೊಳಿಸಲು ಕೆಸಿಆರ್ ಯತ್ನಮಾಡಿದ್ದಾರೆ. ತಮ್ಮ ಭಾಷಣದ ಮೂಲಕ ಕೆಸಿಆರ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡ್ತಾರೆ. ಆದರೆ ವಾಸ್ತವವಾಗಿ ಕಾಂಗ್ರೆಸ್ ಸೋಲಿಸುವ, ದುರ್ಬಲಗೊಳಿಸುವ ಮೂಲಕ ಬಿಜೆಪಿಗೆ ಸಹಾಯ ಮಾಡುತ್ತಾರೆ. ಹೀಗಾಗಿ ಈ ದುರುದ್ದೇಶ ಗೊತ್ತಾಗಿಯೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಕಮ್ಮಂ ಜಿಲ್ಲೆಯ ಸಮಾವೇಶದಲ್ಲಿ ಭಾಗಿಯಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
https://play.google.com/store/apps/details?id=com.speed.newskannada