ವಿಜಯಪುರ: ಅಲ್ಲೊಬ್ಬ ಇಲ್ಲೊಬ್ಬ ಯಂಕ ನಾಣಿ ಹಂಗೆ ಇದ್ದಾರೆ. ನಾನೇ ಮುಂದಿನ ಸಿಎಂ ಅಂತಾ ತಿರುಕನ ಕನಸು ಕಾಣುತ್ತಿದ್ದಾರೆ. ಅದು ತಿರುಕನ ಕನಸಾಗೆ ಉಳಿಯುತ್ತೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಟಾಂಗ್ ಕೊಟ್ಟಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಯಕ ಯಾರು?
ಸಿಂದಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ನಡೀತು. ಈ ಸಭೆಯಲ್ಲಿ ಭಾಷಣ ಮಾಡಿದ ಯಡಿಯೂರಪ್ಪ, ಮಾತು ಮಾತಿಗೂ ಕಾಂಗ್ರೆಸ್ ನಾಯಕರನ್ನ ತರಾಟೆಗೆ ತಗೊಂಡ್ರು. ಅಧಿಕಾರದಲ್ಲಿ ಇದ್ದಾಗ ಏನೂ ಸಾಧಿಸದೆ, ನಾಟಕ ಮಾಡಿಕೊಂಡು ಕಾಂಗ್ರೆಸ್ ದೇಶದ ಜನರಿಗೆ ಮೋಸ ಮಾಡಿದೆ. ಮೋದಿ ಟೀಕೆ ಮಾಡುವ ಅತ್ಯಂತ ಕೀಳು ಮಟ್ಟಕ್ಕೆ ಡಿಕೆಶಿ, ಸಿದ್ದರಾಮಯ್ಯ ಇಳಿದಿದ್ದಾರೆ. ಎಲ್ಲಿದೆ ಕಾಂಗ್ರೆಸ್ ಪಕ್ಷ? ಯಾವ ರಾಜ್ಯದಲ್ಲಿದೆ? ಯಾರು ನಿಮ್ಮ ನಾಯಕ? ಎಂದು ಬಿಎಸ್ವೈ ಪ್ರಶ್ನೆ ಮಾಡಿದ್ರು. ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸೀಟ್ ಗೆದ್ದು ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರುತ್ತೇವೆ ಎಂದು ಗುಡುಗಿದ್ರು.
‘ಬಿಜೆಪಿಗೆ ಅಧಿಕಾರದ ಸೌಭಾಗ್ಯ’
ಇಡೀ ದೇಶದಲ್ಲಿ ಇವತ್ತು ಬಿಜೆಪಿ ಗಾಳಿ ಬೀಸುತ್ತಿದೆ. ಪಾಕಿಸ್ತಾನದ ಪ್ರಧಾನಮಂತ್ರಿಯೇ ಭಾರತವನ್ನು ಹೊಗಳುತ್ತಿದ್ದಾರೆ. ನೀವೇ ಯೋಚನೆ ಮಾಡಿ ಭಾರತ ಹೇಗೆ ಅಭಿವೃದ್ಧಿ ಆಗುತ್ತಿದೆ ಎಂದು. ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳಿಗೂ ಸಹ ಸಿಗಬೇಕಾದ ಸೌಲಭ್ಯ ಸಿಗಬೇಕು ಎಂದು ಪ್ರಧಾನಿ ಅವರೇ ಕರೆ ಕೊಟ್ಟಿದ್ದಾರೆ. ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯನ್ನ ಬೆಂಬಲಿಸಿ ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.
https://play.google.com/store/apps/details?id=com.speed.newskannad