ಕೊಪ್ಪಳ:ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಇಲ್ಲಿನ ನಗರಸಭೆಯ 16ನೇ ವಾರ್ಡ್ ಬಿಜೆಪಿ ಸದಸ್ಯ ಸೋಮಣ್ಣ ಹಳ್ಳಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಎರಡೂ ಕಿವಿ ಮೇಲೆ ಹೂ ಇಟ್ಟುಕೊಂಡು ಪ್ರತಿಭಟನೆ ನಡೆಸಿದರು.
ಸಭಾಂಗಣದ ಮುಂಭಾಗದಲ್ಲಿ ನೆಲದ ಮೇಲೆ ಕುಳಿತು ಮಲ್ಲಿಗೆ ಹಾಗೂ ಕನಕಾಂಬರ ಹೂ ಇಟ್ಟುಕೊಂಡು ನಗರಸಭೆ ಅಧ್ಯಕ್ಷೆ ಕಾಂಗ್ರೆಸ್ನ ಶಿವಗಂಗಾ ಭೂಮಕ್ಕನವರ ವಿರುದ್ಧ ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದರು. ಇದು ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಜಟಾಪಟಿಗೂ ಕಾರಣವಾಯಿತು.
ನನ್ನ ವಾರ್ಡ್ನಲ್ಲಿ ಸಮುದಾಯ ಭವನ ನಿರ್ಮಾಣ ಮಾಡುವಂತೆ ಮೇಲಿಂದ ಮೇಲೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕಾಂಗ್ರೆಸ್ ಸದಸ್ಯರ ವಾರ್ಡ್ಗಳಿಗೆ ಮಾತ್ರ ಅನುದಾನ ನೀಡಲಾಗುತ್ತಿದೆ ಎಂದು ಸೋಮಣ್ಣ ಆರೋಪಿಸಿದರು.
ಈ ವೇಳೆ ಮಧ್ಯೆ ಪ್ರವೇಶಿಸಿದ ನಗರಸಭೆ ಆಯುಕ್ತ ಎಚ್.ಎನ್. ಭಜಕ್ಕನವರ ‘ಕಂದಾಯ ಭೂಮಿಯಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ಅವಕಾಶವಿಲ್ಲ. ಕಾನೂನು ಮೀರಿ ಮಾಡಲು ಸಾಧ್ಯವಿಲ್ಲ’ ಎಂದರು
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada