ಕೇರಳ, ಜ.24. ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಅಂಬಲಪುಳ ಬಳಿ ನಸುಕಿನ ವೇಳೆ ನಡೆದಿದೆ.
ಇವರಲ್ಲಿ ನಾಲ್ವರು ತಿರುವನಂತಪುರಂ ಮೂಲದವರಾಗಿದ್ದು, ನಗರದ ಇಸ್ರೋ ಕ್ಯಾಂಟೀನ್ನಲ್ಲಿ ಕೆಲಸ ಮಾಡುತ್ತಿದ್ದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.ಆಂಧ್ರಪ್ರದೇಶದಿಂದ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಐವರು ಪ್ರಯಾಣಿಸುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ ಮತ್ತೊಬ್ಬರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಪ್ರಸಾದ್, ಶಿಜು, ಅಮಲ್, ಸಚಿನ್ ಮತ್ತು ಸುಮೋದ್ ಎಂದು ಗುರುತಿಸಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Tue Jan 24 , 2023
ನ್ಯೂಯಾರ್ಕ್, ಜ.24. ಗೂಗಲ್ ಸಂಸ್ಥೆಯು ತನ್ನ ಉದ್ಯೋಗಿಗಳಲ್ಲಿ 12,000 ಜನರನ್ನು ವಜಾ ಮಾಡುವ ತೀರ್ಮಾನ ತೆಗೆದುಕೊಳ್ಳದಿದ್ದಲ್ಲಿ ಸಂಸ್ಥೆಯು ಭಾರೀ ಬಿಕ್ಕಟ್ಟಿಗೆ ಸಿಲುಕುತ್ತಿತ್ತು. ಗೂಗಲ್ನ ಮಾಲಕರ ಆಂತರಿಕ ಸಭೆಯಲ್ಲೇ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಗೂಗಲ್ ಸಿಇಒ ಸುಂದರ್ ಪಿಚ್ಚೈ ತಿಳಿಸಿದ್ದಾರೆ. ಗೂಗಲ್ನ ಕೆಲಸದ ಒತ್ತಡ ಕಡಿಮೆಯಾಗಿದ್ದು, ಸಿಬ್ಬಂದಿ ಸಂಖ್ಯೆ ಅಧಿಕವಾಗಿತ್ತು. ಸಂಸ್ಥೆಯ ಒಟ್ಟು ಸಿಬ್ಬಂದಿಯಲ್ಲಿ 6% ಎಂದರೆ 12,000 ಉದ್ಯೋಗಿಗಳ ಬಿಡುಗಡೆ ಅನಿವಾರ್ಯದ ನಿರ್ಧಾರ. ಎಲ್ಲರಿಗೂ ಮಿಂಚಂಚೆ ಮೂಲಕ ಮಾಹಿತಿ ನೀಡಲಾಗಿದೆ. […]