ಕೊಪ್ಪಳ ಕಲುಷಿತ ನೀರು ಕುಡಿದು ಸಾವನ್ನಪ್ಪಿದ ಪ್ರಕರಣ ಒಂದು ಗಂಭೀರ ಸ್ವರೂಪ ಪಡೆದ ಹಿನ್ನೆಲೆ ವಿಶೇಷ ಪರಿಶೀಲನಾ ತನಿಖಾ ತಂಡ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಕೊಪ್ಪಳ ಜಿಲ್ಲೆಯಕುಷ್ಟಗಿ ತಾಲೂಕಿನ ಬಿಜಕಲ್ಗ್ರಾಮಕ್ಕೆ ಭೇಟಿ ನೀಡಿದರು.ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಆಯುಕ್ತೆ ಕಲುಷಿತ ನೀರು ಕುಡಿದ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಇನ್ನೂಗ್ರಾಮದ ಮೆಡಿಕಲ್ ಕ್ಯಾಂಪ್,ಶುದ್ಧ ನೀರಿನ ಘಟಕ, ಜೆಜೆಎಂ ಕಾಮಗಾರಿ, ಸ್ವಚ್ಛತೆ ಬಗೆಯೂ ಪರಿಶೀಲನೆ ನಡೆಸಿದರು.
ಬಿಜಕಲ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 9 ವರ್ಷದ ನಿರ್ಮಲಾ ಎಂಬ ಬಾಲಕಿ ಸಾವನ್ನಪ್ಪಿದ್ದಳು.ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಈ ಘಟನೆಯ ಬಗ್ಗೆ ಪರಿಶೀಲಿಸಿ ತನಿಖೆಗೆ ಸೂಚಿಸಿದ್ದರು.