ಘಾಜಿಯಾಬಾದ್(ಉತ್ತರ ಪ್ರದೇಶ): ಮುರಾದ್ನಗರದ ಅಗ್ರಸೇನ್ ವಿಹಾರ್ ಮೊದಲ ಹಂತದ ಕಾಲೋನಿಯಲ್ಲಿ ಬುಧವಾರ ಗೀಸರ್ನಿಂದ ಗ್ಯಾಸ್ ಸೋರಿಕೆಯಾಗಿ ದಂಪತಿಗಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೋಳಿ ಆಚರಿಸಿದ ನಂತರ, ದೀಪಕ್ (40) ಮತ್ತು ಶಿಲ್ಪಿ (36) ಸ್ನಾನ ಮಾಡಲು ಹೋಗಿ ತಮ್ಮ ಗ್ಯಾಸ್ ಗೀಸರ್ ಅನ್ನು ಸ್ವಿಚ್ ಆನ್ ಮಾಡಿದ್ದಾರೆ.
ಆದರೆ, ಗ್ಯಾಸ್ ಸೋರಿಕೆಯನ್ನು ಗಮನಿಸಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು ಒಂದು ಗಂಟೆಯ ನಂತರ, ಅವರ ಪೋಷಕರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡ ಮಕ್ಕಳು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅವರನ್ನು ಗಾಜಿಯಾಬಾದ್ ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ದಂಪತಿಗಳು ಮೃತಪಟ್ಟಿರುವುದಾಗಿ ಎಂದು ಘೋಷಿಸಿದ್ದಾರೆ.
ಕಾನೂನು ಕ್ರಮಗಳನ್ನು ಪೂರ್ಣಗೊಳಿಸಿದ ನಂತರ ಎರಡೂ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್ಎಚ್ಒ ಮುರಾದನಗರ ಸತೀಶ್ ಕುಮಾರ್ ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada