ಹೋಳಿ ಆಚರಿಸಿ ಸ್ನಾನಕ್ಕೆ ಹೋದ ದಂಪತಿ ಗೀಸರ್ ಗ್ಯಾಸ್ ಸೋರಿಕೆಯಿಂದ ಉಸಿರುಗಟ್ಟಿ ಸಾವು!

ಘಾಜಿಯಾಬಾದ್(ಉತ್ತರ ಪ್ರದೇಶ): ಮುರಾದ್‌ನಗರದ ಅಗ್ರಸೇನ್ ವಿಹಾರ್ ಮೊದಲ ಹಂತದ ಕಾಲೋನಿಯಲ್ಲಿ ಬುಧವಾರ ಗೀಸರ್‌ನಿಂದ ಗ್ಯಾಸ್ ಸೋರಿಕೆಯಾಗಿ ದಂಪತಿಗಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೋಳಿ ಆಚರಿಸಿದ ನಂತರ, ದೀಪಕ್ (40) ಮತ್ತು ಶಿಲ್ಪಿ (36) ಸ್ನಾನ ಮಾಡಲು ಹೋಗಿ ತಮ್ಮ ಗ್ಯಾಸ್ ಗೀಸರ್ ಅನ್ನು ಸ್ವಿಚ್ ಆನ್ ಮಾಡಿದ್ದಾರೆ.

ಆದರೆ, ಗ್ಯಾಸ್ ಸೋರಿಕೆಯನ್ನು ಗಮನಿಸಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು ಒಂದು ಗಂಟೆಯ ನಂತರ, ಅವರ ಪೋಷಕರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡ ಮಕ್ಕಳು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅವರನ್ನು ಗಾಜಿಯಾಬಾದ್ ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ದಂಪತಿಗಳು ಮೃತಪಟ್ಟಿರುವುದಾಗಿ ಎಂದು ಘೋಷಿಸಿದ್ದಾರೆ.

ಕಾನೂನು ಕ್ರಮಗಳನ್ನು ಪೂರ್ಣಗೊಳಿಸಿದ ನಂತರ ಎರಡೂ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್‌ಎಚ್‌ಒ ಮುರಾದನಗರ ಸತೀಶ್ ಕುಮಾರ್ ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇದ್ದಕ್ಕಿದ್ದಂತೆ ಸಾವನ್ನಪ್ಪಿದ ಮತ್ತೊಂದು ಪ್ರಕರಣ!

Thu Mar 9 , 2023
ದೇಶದಲ್ಲಿ ಯುವಕರ ಹೃದಯದ ಆರೋಗ್ಯದ ಬಗ್ಗೆ ಕಳವಳ ಹೆಚ್ಚುತ್ತಿರುವ ಮಧ್ಯೆ, ಪುಣೆಯ ಕುಸ್ತಿಪಟು ತಾಲೀಮಿನ ಸಮಯದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾರುಂಜಿಯ ಮಾಮಸಾಹೇಬ್ ಮೊಹಲ್ ಕುಸ್ತಿ ಸಂಕುಲದಲ್ಲಿ ಬುಧವಾರ ಮುಂಜಾನೆ ತಾಲೀಮು ನಡೆಸಿ ಮೃತಪಟ್ಟಿದ್ದಾರೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ ಕುಸ್ತಿಪಟುವಿನ ಹೆಸರು ಸ್ವಪ್ನಿಲ್ ಪಡಲೆ. ತಾಲೀಮಿನ ವೇಳೆ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಅವರು ಪುಣೆಯ ಕುಸ್ತಿ ವಲಯದಲ್ಲಿ ಹೆಸರಾಂತ ಕುಸ್ತಿಪಟುವಾಗಿದ್ದು […]

Advertisement

Wordpress Social Share Plugin powered by Ultimatelysocial