ಆನೇಕಲ್ ತಹಸೀಲ್ದಾರ್ ಕಚೇರಿಯ ಕುರ್ಚಿಯಲ್ಲಿ ಮಹಿಳೆ ಕುಳಿತಿರುವ ಪೋಟೋ ವೈರಲ್​!

ಬೆಂಗಳೂರು: ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ​ ತಹಸೀಲ್ದಾರ್ ಕಚೇರಿಯ ಕುರ್ಚಿಯಲ್ಲಿ ಓರ್ವ ಮಹಿಳೆ ಕುಳಿತಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಚೇರಿ ದುರುಪಯೋಗ ಆರೋಪ ಕೇಳಿಬಂದಿದೆ.

ಕುರ್ಚಿಯಲ್ಲಿ ಕುಳಿತು ಪೋನ್​​ನಲ್ಲಿ ಮಾತನಾಡುತ್ತಿರುವ ಮಹಿಳೆಯ ಫೋಟೋ ವೈರಲ್​ ಆಗಿದೆ.

ಆನೇಕಲ್ ತಹಸೀಲ್ದಾರ್ ಶಿವಪ್ಪ ಲಮಾಣಿ ಅವರು ಕಾರ್ಯನಿರ್ವಹಿಸುತ್ತಿರುವ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಸ್ವತಃ ತಹಸೀಲ್ದಾರ್ ಅವರೇ ತಮ್ಮ ವಾಟ್ಸ್​ಆಯಪ್​ ಸ್ಟೇಟಸ್​ನಲ್ಲಿ ಪೋಟೋ ಹಾಕಿಕೊಂಡು ಮಹಿಳೆಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದರು ಎನ್ನುವ ಆರೋಪ ಕೇಳಿಬಂದಿದೆ.

ಈ ಘಟನೆಯ ಬೆನ್ನಲ್ಲೇ ಕೆಆರ್​ಎಸ್​ ಪಕ್ಷದಿಂದ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ. ತಹಸೀಲ್ದಾರ್ ಕಚೇರಿ ದುರ್ಬಳಕೆ ಮಾಡಿಕೊಂಡಿರುವ ಮಹಿಳೆಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯ ಮಾಡಿದ್ದಾರೆ. ಪೋಟೋವನ್ನು ಸ್ಟೇಟಸ್​ನಲ್ಲಿ ಹಾಕಿಕೊಂಡ ತಹಸೀಲ್ದಾರ್ ವಿರುದ್ಧವು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಕಾರ್ಯಕಾರಣಿ ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದು,

Sat Feb 4 , 2023
ಬೆಂಗಳೂರು: ಬಿಜೆಪಿ ಕಾರ್ಯಕಾರಣಿ ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮಾಜಿ ಪ್ರಧಾನಿ ದೇವೇಗೌಡರ ಮಕ್ಕಳ (ಕುಮಾರಸ್ವಾಮಿ, ರೇವಣ್ಣ ) ವಿರುದ್ಧ ವಾಗ್ದಾಳಿ ನಡೆಸಿದರು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಜೋಶಿ, ‘ಪಂಚರತ್ನ ಅಂತಾ ಯಾಕೆ ಹೆಸರು ಇಟ್ಟವ್ರೋ ಅಂತಾ ಗೊತ್ತಿಲ್ಲ. ದೇವೇಗೌಡರಿಗೆ, ಇಬ್ಬರು ಮಕ್ಕಳು. ಆ ಇಬ್ಬರಿಗೆ ಇಬ್ರು ಹೆಂಡಂದಿರು. ಅವರ ಮಕ್ಕಳಲ್ಲಿ ಒಬ್ಬ ಎಂಎಲ್ಸಿ, ಮತ್ತೊಬ್ಬ ಎಂಪಿ, ಇನ್ನೊಬ್ಬ ಚುನಾವಣೆ ಯಲ್ಲಿ ಸ್ಪರ್ಧೆ ಮಾಡ್ತಾವ್ನೆ. ಒಟ್ಟು […]

Advertisement

Wordpress Social Share Plugin powered by Ultimatelysocial