ತಿರುಪತಿಯಲ್ಲಿ ದಾಖಲೆ ನಿರ್ಮಿಸಿದ ವೈಕುಂಠ ಏಕಾದಶಿಯ ಕಾಣಿಕೆ!

ಹೈದರಾಬಾದ್​​: ವಿಶ್ವದ ಅತ್ಯಂತ ಶ್ರೀಮಂತ ದೇಗುಲಗಳ ಪೈಕಿ ಒಂದು ಎನಿಸಿಕೊಂಡಿರುವ ತಿರುಪತಿ ತಿಮ್ಮಪ್ಪನ ಹುಂಡಿಗೆ ವೈಕುಂಠ ಏಕಾದಶಿ ದಿನದಂದು ದಾಖಲೆ ಪ್ರಮಾಣದಲ್ಲಿ ಕಾಣಿಕೆ ಹರಿದುಬಂದಿದೆ.ವೈಕುಂಠ ಏಕಾದಶಿಯ ದಿನ ವ್ರತ ಆಚರಿಸಿ ಗೋವಿಂದನ ದರ್ಶನ ಪಡೆದರೆ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎನ್ನುವ ನಂಬಿಕೆ ತಲತಲಾಂತರಗಳಿಂದಲೂ ಇದೆ.ಹೀಗಾಗಿ ಲಕ್ಷಾಂತರ ಭಕ್ತರು ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭೇಟಿ ನೀಡಿದ್ದು, ಒಂದೇ ದಿನದಲ್ಲಿ ತಿಮ್ಮಪ್ಪನ ಹುಂಡಿಗೆ 7.68 ಕೋಟಿ ರೂಪಾಯಿ ಸಂಗ್ರಹವಾಗಿದೆ. ಇದು ಈವರೆಗಿನ ಗರಿಷ್ಠ ಮೊತ್ತ ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.ಕಳೆದ ವರ್ಷ ಅಕ್ಟೋಬರ್​​​ನಲ್ಲಿ 6.31 ಕೋಟಿ ಸಂಗ್ರಹವಾಗಿತ್ತು, ಅದು ಇಲ್ಲಿಯವರೆಗೂ ದಾಖಲೆ ಎನಿಸಿತ್ತು. ಈ ಬಾರಿ ವೈಕುಂಠ ಏಕಾದಶಿಗೆ ಆ ರೆಕಾರ್ಡ್​​​ ಬ್ರೇಕ್​​ ಆಗಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಎರಡನೇ ಟಿ20 ಪಂದ್ಯಕ್ಕೆ ಭಾರತ-ಶ್ರೀಲಂಕಾ ತಂಡಗಳ ಸಂಭಾವ್ಯ ಪ್ಲೇಯಿಂಗ್‌ XI

Wed Jan 4 , 2023
ಶ್ರೀಲಂಕಾ ವಿರುದ್ಧ ಮೊದಲನೇ ಪಂದ್ಯ ಗೆದ್ದು ವಿಶ್ವಾಸ ಹೆಚ್ಚಿಸಿಕೊಂಡಿರುವ ಭಾರತ ತಂಡ ಗುರುವಾರ ನಡೆಯುವ ಎರಡನೇ ಹಣಾಹಣಿಯನ್ನೂ ಗೆದ್ದು ಟಿ20 ಸರಣಿಯನ್ನು ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ. ಉಭಯ ತಂಡಗಳ ನಡುವಣ ಎರಡನೇ ಟಿ20 ಪಂದ್ಯಕ್ಕೆ ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಮೈದಾನದಲ್ಲಿ ವೇದಿಕೆ ಸಿದ್ದವಾಗಿದೆ.ಮೊದಲನೇ ಟಿ20 ಪಂದ್ಯ ಮಂಗಳವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿತ್ತು. ಕೊನೆಯ ಎಸೆತದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಪಂದ್ಯದಲ್ಲಿ ಪ್ರಾಬಲ್ಯ ಸಾಧಿಸಿದ ಭಾರತ ತಂಡ ಕೇವಲ […]

Advertisement

Wordpress Social Share Plugin powered by Ultimatelysocial