ಸ್ಯಾಂಡಲ್ ವುಡ್ ನ ನಾಯಕ ನಟ ಅನೀಶ್ ಅವರ ಮುಂದಿನ ಸಿನಿಮಾ ಅಧಿಕೃತವಾಗಿ ಘೋಷಣೆಯಾಗಿದೆ. ಹೊಸ ಸಿನಿಮಾದ ಹೆಸರು ಬಹಿರಂಗವಾಗಿದ್ದು ‘ಬೆಂಕಿ’ ಎನ್ನುವ ಈ ಪ್ರಾಜೆಕ್ಟ್ ಅಣ್ಣ ತಂಗಿ ಸೆಂಟಿಮೆಂಟ್ ಎಳೆಯನ್ನು ಹೊಂದಿರಲಿದೆ.
ಬೆಂಕಿ ಸಿನಿಮಾವನ್ನು ಕನ್ನಡದ ನಿರ್ದೇಶಕ ಎ.ಆರ್.ಬಾಬು ಅವರ ಪುತ್ರ ಶಾನ್ ಅವರು ನಿರ್ದೇಶಿಸುತ್ತಿದ್ದಾರೆ.
ಬೆಂಕಿ ಸಿನಿಮಾವನ್ನು ಅನೀಶ್ ಅವರೇ ನಿರ್ಮಾಣ ಮಾಡುತ್ತಿದ್ದಾರೆ ಎನ್ನುವುದು ವಿಶೇಷ.
ಬೆಂಕಿ ಸಿನಿಮಾ ಕೇವಲ ಅಣ್ಣ-ತಂಗಿ ಸೆಂಟಿಮೆಂಟ್ ಮಾತ್ರವಲ್ಲ ಕಾಮಿಡಿ- ಹಾರರ್ ಸಿನಿಮಾ ಕೂಡಾ ಎಂದು ಹೇಳುವ ಮೂಲಕ ಅನೀಶ್ ಕುತೂಹಲ ಹುಟ್ಟುಹಾಕಿದ್ದಾರೆ. ನಟಿ ಸಂಪದ ಹುಲಿವನ ಅವರು ಪ್ರೇತವಾಗಿ ನಟಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಶ್ರುತಿ ಪಾಟೀಲ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹೊಣೆ ಹೊತ್ತುಕೊಂಡಿದ್ದರೆ ವೀನಸ್ ನಾಗರಾಜ ಮೂರ್ತಿಯವರು ಸಿನಿಮೆಟೊಗ್ರಫಿ ಹೊಣೆ ಹೊತ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada