ಇತ್ತೀಚೆಗೆ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರ್ಥಿಕ ಸಂಕಷ್ಟಗಳಿಗೆ ಗುರಿಯಾಗಿ ತನ್ನ ಕಾರಿನ ಸಮೇತ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ಚಾಲಕ ಪ್ರತಾಪ್ ಮನೆ ಇರುವ ರಾಮನಗರ ಜಿಲ್ಲೆಯ ಚುಂಚೇನಹಳ್ಳಿಗೆ ಭೇಟಿ ನೀಡಿದ,
ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ರಾಜ್ಯ ಉಸ್ತುವಾರಿ ರೋಮಿ ಭಾಟಿ ,ರಾಮನಗರ ಜಿಲ್ಲಾ ಅಧ್ಯಕ್ಷ ನಂಜಪ್ಪ ಕಾಳೇಗೌಡ ಹಾಗೂ ಇನ್ನಿತರ ಪಕ್ಷದ ಕಾರ್ಯಕರ್ತರುಗಳು ನೊಂದ ಕುಟುಂಬ ವರ್ಗಕ್ಕೆ ಸಾಂತ್ವನವನ್ನು ಹೇಳಿದರು. ಇದೇ ಸಂದರ್ಭದಲ್ಲಿ 25000 ರೂ ಗಳ ಸಹಾಯಧನದ ಚೆಕ್ ಅನ್ನು ನೀಡಿದರು.