ತುಮಕೂರು ಜಿಲ್ಲೆ ಕೊರಟಗೆರೆ ಪೋಲೀಸರು ಮುಖ್ಯ ಶಿಕ್ಷಕನನ್ನ
ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ. ಕೊರಟಗೆರೆ ಪಟ್ಟಣದ ಬೆಂಗಳೂರು ರಸ್ತೆಯ ರಾಘವೇಂದ್ರ ಇಂಟರ್ ನ್ಯಾಷನಲ್ ಶಾಲೆಯ ಮುಖ್ಯ ಶಿಕ್ಷಕ ಅಬ್ದುಲ್ ಹಜೀಜ್ ಬಂಧಿತರು. ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯರ ಬಳಿ ಮುಖ್ಯ ಶಿಕ್ಷಕ ಅಸಭ್ಯವಾಗಿ ವರ್ತಿಸುತ್ತಿರುವುದರಿಂದ ಬೇಸತ್ತ ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ನೋವು ಹೇಳಿಕೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡ ಪೋಷಕರು ಶಾಲೆಯ ಬಳಿ ಬಂದು ಗಲಾಟೆ ಮಾಡಿದ್ದಾರೆ. ವಿಷಯ ತಿಳಿದ ಸಿಡಿಪಿಓ ಅಂಬಿಕಾ ವಿಷಯ ಸಂಗ್ರಹಿಸಿ ಕೊರಟಗೆರೆ ಪೊಲೀಸರಿಗೆ ದೂರು ನೀಡಿದ್ದಾರೆ. ಪಿಎಸ್ಐ ಮಂಜುಳಾ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: