ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಅಭಿಷೇಕ್ ಅಂಬರೀಷ್ ನಟಿಸಿದ್ದು ಸಿನಿಮಾ ಶೂಟಿಂಗ್ ಮುಕ್ತಾಯದ ಹಂತದಲ್ಲಿದೆ, ಇದೇ ವೇಳೆ ಅಭಿಷೇಕ್ ಮತ್ತೊಂದು ಸಿನಿಮಾದಲ್ಲಿ ಚಾನ್ಸ್ ಪಡೆದುಕೊಂಡಿದ್ದಾರೆ.
ಹೆಬ್ಬುಲಿ, ಪೈಲ್ವಾನ್ ನಿರ್ದೇಶಕ ಎಸ್.ಕೃಷ್ಣ ಅವರ ನಿರ್ದೇಶನ ಸಿನಿಮಾದಲ್ಲಿ ಅಭಿಷೇಕ್ ನಟಿಸುತ್ತಿದ್ದಾರೆ.
ಸಿನಿಮಾಗೆ ಕಾಳಿ ಎಂದು ಟೈಟಲ್ ಫಿಕ್ಸ್ ಆಗಿದೆ.
1990 ರ ಕಾವೇರಿ ಗಲಾಟೆಯ ವೇಳೆ ನಡೆಯು ರೊಮ್ಯಾಂಟಿಕ್ ಕಥೆ ಇದಾಗಿದೆ. ಆದಾಗ್ಯೂ ಸಿನಿಮಾದ ಬಗ್ಗೆ ನಟ ಮತ್ತು ನಿರ್ದೇಶಕರು ಹೆಚ್ಚಿನ ಮಾಹಿತಿ ನೀಡಿಲ್ಲ. ಕೃಷ್ಣ ಮತ್ತು ಅಭಿಷೇಕ್ ಸಿನಿಮಾಗಾಗಿ ಮಾತುಕತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಭಿಷೇಕ್ ತಮ್ಮ ಹಿಂದಿನ ಸಿನಿಮಾಗಳನ್ನು ಪೂರ್ಣಗೊಳಿಸಿದ ನಂತರ ಕೃಷ್ಣ ನಿರ್ದೇಶನದ ಚಿತ್ರ ಆರಂಭವಾಗಲಿದೆ. ಕಾಳಿ ಸಿನಿಮಾ ಜೂನ್ ನಲ್ಲಿ ಆರಂಭವಾಗುವ ಸಾಧ್ಯತೆಯಿದೆ, ಆರ್ ಆರ್ ಆರ್ ಮೋಷನ್ ಪಿಕ್ಚರ್ಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣವಾಗಲಿದೆ.
ತಾರಾಗಣ ಮತ್ತು ಸಿಬ್ಬಂದಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ಚಿತ್ರತಂಡ ಕೆಲಸ ಮಾಡುತ್ತಿದೆ. ಪ್ರಾಜೆಕ್ಟ್ ಕುರಿತು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು.
ಎಸ್ ಕೃಷ್ಣ ಈ ಹಿಂದೆ ಪುನೀತ್ ರಾಜ್ ಕುಮಾರ್ ಅವರನ್ನು ನಿರ್ದೇಶಿಸಬೇಕಿತ್ತು. ಆದರೆ, ಪವರ್ಸ್ಟಾರ್ ಅವರ ಅಕಾಲಿಕ ಮರಣದಿಂದ ಈ ಸಿನಿಮಾ ಪ್ರಾರಂಭವಾಗಲಿಲ್ಲ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada