ಕುಲದೇವತೆಯ ದರ್ಶನಕ್ಕೆ ತೆರಳುತ್ತಿದ್ದಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ!

ಜೋದ್‍ಪುರ್,ಏ.15- ಕುಲದೇವತೆಯ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಜೋದ್‍ಪುರ್, ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಚುರು ಗ್ರಾಮದ ನಿವಾಸಿಗಳಾದ ವಿಜಯ್ ಸಿಂಗ, ಉದಯ್ ಪ್ರತಾಪ್ ಸಿಂಗ್, ಮಂಜು ಕನ್ವರ್, ಪ್ರವೀಣ್‍ಸಿಂಗ್, ದರ್ಪಣ್ ಸಿಂಗ್ ಮತ್ತು ಮಧು ಕೌವಾರ್ ಸಾವನ್ನಪ್ಪಿರುವ ದುರ್ದೈವಿಗಳು.

ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೆ ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಬಿಲಾರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇವರೆಲ್ಲರೂ ನಾಗಾಣ ಕುಲದೇವಿ ದರ್ಶನಕ್ಕೆ ಬುಲೇರೋ ವಾಹನದಲ್ಲಿ ತೆರಳುತ್ತಿದ್ದರು. ಬಿಲಾರ ಸಮೀಪದ ಜುರ್ಲಿಫಾಂಟಾ ಬಳಿ ರಾತ್ರಿ 1 ಗಂಟೆ ಸುಮಾರಿಗೆ ರಸ್ತೆಯಲ್ಲಿ ನಿಂತಿದ್ದ ಟ್ರಕ್‍ನ ಹಿಂಬದಿಗೆ ಬುಲೆರೋ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಬಿಲಾಡ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಜಿಲ್ಲಾಕಾರಿ ಹಿಮಾಂಶು ಗುಪ್ತ , ಎಂಡಿಎಂ ಆಸ್ಪತ್ರೆಗೆ ತೆರಳಿ ಗಾಯಾಳುಗಳಿಗೆ ಚಿಕಿತ್ಸೆ ವ್ಯವಸ್ಥೆ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಬೀಸ್ಟ್' ಬಾಕ್ಸ್ ಆಫೀಸ್ ಕಲೆಕ್ಷನ್ಸ್, ದಿನ 2:ವಿಜಯ್-ಸ್ಟಾರರ್ 'ಕೆಜಿಎಫ್ 2' ನಿಂದ ಕಠಿಣ ಸ್ಪರ್ಧೆಯನ್ನು ಎದುರಿಸುತ್ತಿದೆ!

Fri Apr 15 , 2022
ಅಭಿಮಾನಿಗಳ ನೆಚ್ಚಿನ ನಟರಾದ ಥಲಪತಿ ವಿಜಯ್ ಮತ್ತು ಪೂಜಾ ಭಟ್ ಅವರ ಬಹು ನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ಏಪ್ರಿಲ್ 13, 2022 ರಂದು ಥಿಯೇಟರ್‌ಗಳನ್ನು ತಲುಪಿತು. ವಿಜಯ್ ಅವರ ಅಭಿಮಾನಿಗಳು ತಮ್ಮ 2021 ರ ಚಲನಚಿತ್ರ ಮಾಸ್ಟರ್ ನಂತರ ದೊಡ್ಡ ಪರದೆಗಳಿಗೆ ಮರಳುವುದನ್ನು ತೆರೆದ ಹೃದಯದಿಂದ ಆಚರಿಸಿದರು. ಬೀಸ್ಟ್ ವು ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 26.40 ಕೋಟಿ ರೂಪಾಯಿಗಳೊಂದಿಗೆ ಬೃಹತ್ ಓಪನಿಂಗ್ ಕಂಡಿತು. ಈ ಚಿತ್ರವು ದಳಪತಿ ವಿಜಯ್‌ಗೆ ಎರಡನೇ ಅತಿ […]

Advertisement

Wordpress Social Share Plugin powered by Ultimatelysocial