ಚೀದ್ರ ಚೀದ್ರವಾಗಿ ಭೀಕರ ರಸ್ತೆ ಅಪಘಾತ: 9 ಮಂದಿ ಸ್ಥಳದಲ್ಲೇ ಸಾವು.

ತಿರುಪತಿ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಉರುವಕೊಂಡ ಮಂಡಲದ ಬುಡಗಾವಿ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಬಳ್ಳಾರಿಯಿಂದ ವಿವಾಹ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಒಂಬತ್ತು ಮಂದಿ ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ.

ಮೃತಪಟ್ಟ ಎಲ್ಲರೂ ಉರುವಕೊಂಡ ಮಂಡಲದ ನಿಮ್ಮಗಲ್ಲು ಗ್ರಾಮದವರು ಎಂದು ಪೊಲೀಸರು ಹೇಳಿದ್ದಾರೆ.

 

ಬಳ್ಳಾರಿಯಲ್ಲಿ ವಿವಾಹ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಇವರ ವಾಹನಕ್ಕೆ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದು ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟರು ಎಂದು ವಿವರಿಸಿದ್ದಾರೆ.

ನಜ್ಜುಗುಜ್ಜಾದ ವಾಹನದ ಅಡಿಯಲ್ಲಿ ಸಿಲುಕಿಕೊಂಡಿದ್ದ ಶವಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಮೃತದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಒಯ್ಯಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ಮೃತಪಟ್ಟವರ ಗುರುತನ್ನು ಪತ್ತೆ ಮಾಡಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನವದೆಹಲಿ: ಪಾಕಿಸ್ತಾನದ ಪರವಾಗಿ ಟ್ವೀಟ್‌ ಮಾಡಿ, ಭಾರತದ ವಿರುದ್ಧ ಸಾರ್ವಜನಿಕವಾಗಿ ಹೇಳಿಕೆ ನೀಡಿದ ಹ್ಯುಂಡೈ ಕಂಪೆನಿಗೆ ಇದೀಗ ಭಾರತದಿಂದ ಬಹಿಷ್ಕಾರದ ಬಿಸಿ ತಟ್ಟಿದೆ.

Mon Feb 7 , 2022
‘ಕಾಶ್ಮೀರ ಪ್ರತ್ಯೇಕಿಸುವಲ್ಲಿ ಹೋರಾಟ ಮಾಡಿದ ನಮ್ಮ ಕಾಶ್ಮೀರಿ ಸಹೋದರರನ್ನು ಸ್ಮರಿಸೋಣ, ಮುಂದಿನ ಹೋರಾಟವನ್ನು ಬೆಂಬಲಿಸೋಣ’ ಎಂದು ಹ್ಯುಂಡೈ ಟ್ವೀಟ್‌ ಮಾಡಿತ್ತು.ಫೆಬ್ರವರಿ 5ನೇ ತಾರೀಖನ್ನು ಪ್ರತಿವರ್ಷವೂ ‘ಪಾಕಿಸ್ತಾನ ಕಾಶ್ಮೀರ ದಿನ’ ಎಂದು ಆಚರಿಸುತ್ತದೆ. ಈ ದಿನಾಚರಣೆಗೆ ಕಾರಣ, ಕಾಶ್ಮೀರವು ಪಾಕಿಸ್ತಾನಕ್ಕೆ ಸೇರಿದೆ, ಇದರ ವಿಮೋಚನೆ ಅಗತ್ಯ ಎನ್ನುವುದಕ್ಕಾಗಿ. ಇದನ್ನು ಬೆಂಬಲಿಸಿ ಹ್ಯುಂಡೈ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕಾಶ್ಮೀರವನ್ನು ಪ್ರತ್ಯೇಕಿಸುವ ಹಾಗೂ ಭಾರತದ ವಿರುದ್ಧದ ಹೋರಾಟ ಬೆಂಬಿಲಿಸಿ ಟ್ವೀಟ್ ಮಾಡಿ ಈಗ […]

Advertisement

Wordpress Social Share Plugin powered by Ultimatelysocial