ಮೊದಲ ಹಂತದ 97 ಗ್ರಾಮಗಳಲ್ಲಿ ಇನ್ನೂ ಕೂಡ ಗುಡಿಸಲುಗಳು ಇವೆ. ಕೆಲವೆಡೆ ಗ್ರಂಥಾಲಯಗಳು, ಸ್ತ್ರೀಶಕ್ತಿ ಸಂಘಗಳು, ಅಂಬೇಡ್ಕರ್ ಭವನ, ಬಾಬುಜಗಜೀವನರಾಂ ಭವನ ಸೇರಿದಂತೆ ಸಮುದಯ ಭವನಗಳು ಇಲ್ಲ. ಆದರ್ಶ ಗ್ರಾಮಗಳನ್ನು ಗುಡಿಸಲು ಮುಕ್ತ ಗ್ರಾಮಗಳನ್ನಾಗಿಸಿ, ಮನೆ ರಹಿತರಿಗೆ ಮನೆ ಮಂಜೂರು ಮಾಡಲು ಹಾಗೂ ಗ್ರಂಥಾಲಯ, ಸಮುದಾಯ ಭವನಗಳ ಭವನಗಳನ್ನು ನಿರ್ಮಿಸಲು ಪಟ್ಟಿ ತಯಾರಿಸಿ, ಕ್ರಿಯಾ ಯೋಜನೆ ಸಲ್ಲಿಸಿದಲ್ಲಿ, ಕೇಂದ್ರ ಸರ್ಕಾರದಿಂದ ಅನುದಾನ ಒದಗಿಸಲಾಗುವುದು ಎಂದರು.ಚಿತ್ರದುರ್ಗ : ಜಿಲ್ಲೆಯಲ್ಲಿ ಆದರ್ಶ ಗ್ರಾಮ ಯೋಜನೆಯಡಿ 97 ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನಗೊಂಡಿದ್ದು, ಉಳಿದಂತೆ ಈ ಗ್ರಾಮಗಳನ್ನು ಗುಡಿಸಲು ಮುಕ್ತವಾಗಿಸಿ, ಮಾದರಿ ಗ್ರಾಮಗಳನ್ನಾಗಿಸುವ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಿಸುವಂತೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಮತ್ತು ಸಂಸದರಾದ ಎ. ನಾರಾಯಣಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…