ಮೋದಿ – ಅಮಿತ್ ಶಾ ರಾಜ್ಯ ಪ್ರವಾಸದ ಬೆನ್ನಲ್ಲೆ ಹೆಚ್ಚಾಯ್ತು ಕಾರ್ಯಕರ್ತರ ಕ್ರೇಜ್.

ಪ್ರಧಾನಿ ನರೆಂದ್ರ ಮೋದಿ ಹಾಗೂ ಕೇಂದ್ರ ನಾಯಕರ ರಾಜ್ಯ ಪ್ರವಾಸದ ಹಿನ್ನಲೆ, ಕಲ್ಪತರು ನಾಡು ತುಮಕೂರಿನ ಕೇಸರಿ ಪಾಳೆಯದಲ್ಲಿ ಕಮಲ ಧ್ವಜ ಹಿಡಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ತುಮಕೂರು ಜಿಲ್ಲೆಗೆ ಭೇಟಿ ನೀಡಿದ್ದರು, ಇಂದು ರಾಜ್ಯಕ್ಕೆ ಚುನಾವಣೆ ಚಾಣಾಕ್ಯ ಅಮಿತ್ ಶಾ ಭೇಟಿ ನೀಡಿದ್ದಾರೆ, ಈ ನಡುವೆ ದಿನದಿಂದ ದಿನಕ್ಕೆ ಕಾರ್ಯಕರ್ತರಲ್ಲಿ ಚುನಾವಣೆ ಜೋಶ್ ಹೆಚ್ಚಾಗತೊಡಗಿದೆ. ಇತ್ತ ಮೊದಲ ಬಾರಿ ಶಿರಾ ಕೋಟೆಯಲ್ಲಿ ಕಮಲ ಅರಳಿಸುವ ಮೂಲಕ ಕಮಾಲ್ ಮಾಡಿದ್ದ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ನೇತೃತ್ವದಲ್ಲಿ ಕಮಲ ಸೇರ್ಪಡೆಯಾಗುವವರ ಸಾಲು ಬೃಹದಾಕಾರವಾಗಿ ಬೆಳೆಯುತ್ತಿದೆ. ಶಿರಾ ತಾಲ್ಲೂಕಿನ ಬರಗೂರು ಗ್ರಾಮದಲ್ಲಿ ನಡೆದ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಭಾಗಿಯಾದ ಹಲವು ಪಕ್ಷಗಳ ಮುಖಂಡರುಗಳು ಹಾಗೂ ಕಾರ್ಯಕರ್ತರು ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹಾಗೂ ಶಿರಾ ಶಾಸಕ ರಾಜೇಶ್ ಗೌಡ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾರ್‌ಗೆ ಲಾರಿ ಡಿಕ್ಕಿ ನವದಂಪತಿ ಸಾವು.

Sun Feb 12 , 2023
  ಸಂಬಂಧಿಕರ ಮದುವೆಗೆ ಕಾರಿನಲ್ಲಿ ತೆರಳುತ್ತಿದ್ದ ನವದಂಪತಿ ವಿಧಿಯಾಟಕ್ಕೆ ಸಿಲುಕಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹುಳಿಯಾರು ಗೇಟ್‌ನಲ್ಲಿ ನಡೆದಿದೆ. ತಾಲ್ಲೂಕಿನ ತಿಗಳನಹಳ್ಳಿಯ ಅನುಷಾ (೨೮) ಹಾಗೂ ಅರಸೀಕೆರೆ ಮೂಲದ ರಘು (೩೨) ಎಂಬುವರೇ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿ ನವದಂಪತಿಗಳು.ಕಳೆದ ಎರಡುತಿಂಗಳ ಹಿಂದೆಯಷ್ಟೆ ಈ ದಂಪತಿಗಳ ಮದುವೆಯಾಗಿತ್ತು. ಇವರಿಬ್ಬರು ಸಾಫ್ಟ್‌ವೇರ್ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಅನುಷಾ ತಮ್ಮ ತವರು ಮನೆಯಿಂದ ಪತಿಯೊಂದಿಗೆ ಬಳ್ಳಾರಿಯಲ್ಲಿ […]

Advertisement

Wordpress Social Share Plugin powered by Ultimatelysocial