ಪ್ರಧಾನಿ ನರೆಂದ್ರ ಮೋದಿ ಹಾಗೂ ಕೇಂದ್ರ ನಾಯಕರ ರಾಜ್ಯ ಪ್ರವಾಸದ ಹಿನ್ನಲೆ, ಕಲ್ಪತರು ನಾಡು ತುಮಕೂರಿನ ಕೇಸರಿ ಪಾಳೆಯದಲ್ಲಿ ಕಮಲ ಧ್ವಜ ಹಿಡಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ತುಮಕೂರು ಜಿಲ್ಲೆಗೆ ಭೇಟಿ ನೀಡಿದ್ದರು, ಇಂದು ರಾಜ್ಯಕ್ಕೆ ಚುನಾವಣೆ ಚಾಣಾಕ್ಯ ಅಮಿತ್ ಶಾ ಭೇಟಿ ನೀಡಿದ್ದಾರೆ, ಈ ನಡುವೆ ದಿನದಿಂದ ದಿನಕ್ಕೆ ಕಾರ್ಯಕರ್ತರಲ್ಲಿ ಚುನಾವಣೆ ಜೋಶ್ ಹೆಚ್ಚಾಗತೊಡಗಿದೆ. ಇತ್ತ ಮೊದಲ ಬಾರಿ ಶಿರಾ ಕೋಟೆಯಲ್ಲಿ ಕಮಲ ಅರಳಿಸುವ ಮೂಲಕ ಕಮಾಲ್ ಮಾಡಿದ್ದ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ನೇತೃತ್ವದಲ್ಲಿ ಕಮಲ ಸೇರ್ಪಡೆಯಾಗುವವರ ಸಾಲು ಬೃಹದಾಕಾರವಾಗಿ ಬೆಳೆಯುತ್ತಿದೆ. ಶಿರಾ ತಾಲ್ಲೂಕಿನ ಬರಗೂರು ಗ್ರಾಮದಲ್ಲಿ ನಡೆದ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಭಾಗಿಯಾದ ಹಲವು ಪಕ್ಷಗಳ ಮುಖಂಡರುಗಳು ಹಾಗೂ ಕಾರ್ಯಕರ್ತರು ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹಾಗೂ ಶಿರಾ ಶಾಸಕ ರಾಜೇಶ್ ಗೌಡ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada