ಬಿಗ್ ಬಾಸ್ ಮನೆಯಲ್ಲಿ ಆರಂಭವಾದ ಸಂಬಂಧಗಳು ಹೊರ ಹೋದ ಬಳಿಕವೂ ಮುಂದುವರೆಯುತ್ತದೆ. ಇದೀಗ ಆರ್ಯವರ್ಧನ್ ಗುರೂಜಿ ಮನೆಗೆ ಅರುಣ್ ಸಾಗರ್ ಭೇಟಿ ನೀಡಿದ್ದಾರೆ.
ಸಂಖ್ಯಾಶಾಸ್ತ್ರ ಹೇಳುವ ಮೂಲಕ ಜನಪ್ರಿಯತೆ ಹೊಂದಿದ್ದ ಆರ್ಯವರ್ಧನ್ ಗುರೂಜಿ ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದರು.
ಮನೆಯಲ್ಲಿ ಕಡೆಯ ದಿನದವರೆಗೂ ಆಟವಾಡಿ ಸೈ ಎನಿಸಿಕೊಂಡಿದ್ದರು. ಅದೇ ರೀತಿ ಸ್ಪರ್ಧಿ ಅರುಣ್ ಸಾಗರ್ ಅವರು ತಮ್ಮದೇ ಶೈಲಿಯಲ್ಲಿ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದರು.
ಈಗ ಬಿಗ್ ಬಾಸ್ ಮನೆಯ ಆಟ ಮುಗಿದು ಒಂದು ತಿಂಗಳು ಕಳೆದಿದೆ. ಆಟ ಮುಗಿದ ಬಳಿಕವೂ ಸಂಬಂಧಗಳು ಮತ್ತಷ್ಟು ಗಟ್ಟಿಯಾಗಿದೆ. ಈಗ ಆರ್ಯವರ್ಧನ್ ಗುರೂಜಿ ಮನೆಗೆ ಅರುಣ್ ಸಾಗರ್ ಭೇಟಿ ನೀಡಿದ್ದಾರೆ. ಕೆಲ ಸಮಯ ಕಳೆದಿದ್ದಾರೆ. ದೊಡ್ಮನೆಯ ಸಾಕಷ್ಟು ವಿಚಾರಗಳನ್ನ ನೆನಪಿಸಿಕೊಂಡಿದ್ದಾರೆ.
ಆರ್ಯವರ್ಧನ್ ಗುರೂಜಿ, ಅರುಣ್ ಸಾಗರ್ ಅವರಿಗೆ ಪೇಟ ತೋಡಿಸಿ, ಶಾಲು ಹಾಕಿ ಸನ್ಮಾನ ಮಾಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada