ಹಿರಿಯ ನಟಿ ಲೀಲಾದೇವಿ ಆರೋಗ್ಯ ವಿಚಾರಿಸಿದ ನಟ ಶ್ರೀನಾಥ್.

 

ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿತ್ರೋದ್ಯಮದ ಹಿರಿಯ ನಟ ಶ್ರೀನಾಥ್ , ನಟಿ ಪದ್ಮಾ ವಾಸಂತಿ ನಟ ಸುಂದರಾಜ್, ಪ್ರಮೀಳಾ ಜೋಷಾಯಿ ಸೇರಿದಂತೆ ಹಲವರು ಲೀಲಾವತಿ ಅವರ ನಿವಾಸಕ್ಕೆ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ.ಎರಡು ತಿಂಗಳು ಹಿಂದೆಯಷ್ಟೇ ನಟಿಯರಾದ ಶ್ರುತಿ ಸೇರಿದಂತೆ ಹಲವರು ಲೀಲಾವತಿ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದರು. ಇದೀಗ ಶ್ರೀನಾಥ್ ಮತ್ತು ತಂಡ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಕೆಲ ಸಮಯ ಕಳೆದಿದೆ. ಹಳೆಯ ದಿನಗಳನ್ನು ಅವರೊಂದಿಗೆ ಮೆಲುಕು ಹಾಕಿದೆ.ಸಿನಿಮಾ ರಂಗದಿಂದ ದೂರವಾದ ನಂತರ ಲೀಲಾವತಿ ಅವರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ಊರಲ್ಲಿ ಆಸ್ಪತ್ರೆ ಕಟ್ಟಿಸಿದ್ದಾರೆ. ಅಲ್ಲದೇ, ರೈತರಿಗೆ ನಾನಾ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಲೀಲಾವತಿ ಅವರ ಜೊತೆ ಪುತ್ರ ವಿನೋದ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ.ನಾಲ್ಕುನೂರಕ್ಕೆ ಹೆಚ್ಚು ಚಿತ್ರಗಳನ್ನು ಮಾಡಿರುವ ಲೀಲಾವತಿ ಸದ್ಯ ಬೆಂಗಳೂರು ಸಮೀಪದ ಸೋಲದೇವನಹಳ್ಳಿಯಲ್ಲಿ ವಾಸವಾಗಿದ್ದಾರೆ. ಅಲ್ಲಿಯೇ ಅವರ ತೋಟ ಕೂಡ ಇದೆ. ಮೊನ್ನೆಯಷ್ಟೇ ತಮ್ಮ ಚೆನ್ನೈನಲ್ಲಿದ್ದ ಜಮಿಚೀನು ಮಾರಿ ಬಂದ ಹಣದಲ್ಲಿ ‘ಡಾ.ಲೀಲಾವತಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

UPSC Examಗೆ ಐಚ್ಛಿಕವಾಗಿ ಈ ವಿಷಯಗಳನ್ನು ತೆಗೆದುಕೊಂಡರೆ ಸುಲಭವಾಗಿ ಹೆಚ್ಚು ಅಂಕ ಗಳಿಸಬಹುದು.

Thu Feb 23 , 2023
2023ನೇ ಸಾಲಿನ ಸಿವಿಲ್ ಸರ್ವೀಸಸ್ ಪರೀಕ್ಷೆ (UPSC Exam) ದಿನಾಂಕಗಳು ಹೊರಬಿದ್ದಿದ್ದು, ಮೇ 28ರಂದು ಪ್ರಿಲಿಮ್ಸ್​ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಐಎಎಸ್​, ಐಪಿಎಸ್​ (IAS-IPS) ಆಗಬೇಕು ಎಂಬ ಗುರಿಯೊಂದಿಗೆ ಲಕ್ಷಾಂತರ ಅಭ್ಯರ್ಥಿಗಳು ಪರೀಕ್ಷಾ ತಯಾರಿಯಲ್ಲಿ (UPSC Preparation) ತೊಡಗಿದ್ದಾರೆ. ಅವರಿಗೆ ಉಪಯುಕ್ತವಾದ ಮಾಹಿತಿ ಇಲ್ಲಿದೆ. ಸಾಮಾನ್ಯವಾಗಿ ಅಭ್ಯರ್ಥಿಗಳು UPSC ಸಿವಿಲ್ ಸರ್ವೀಸಸ್ ಪರೀಕ್ಷೆಯಲ್ಲಿ ಐಚ್ಛಿಕವಾಗಿ ಯಾವ ವಿಷಯವನ್ನು ತೆಗೆದುಕೊಳ್ಳಬೇಕೆಂದು ಗೊಂದಲಕ್ಕೊಳಗಾಗುತ್ತಾರೆ. ಹೆಚ್ಚು ಅಂಕಗಳನ್ನು ಗಳಿಸುವ ವಿಷಯವನ್ನು ಆಯ್ಕೆ ಮಾಡಬೇಕೇ […]

Advertisement

Wordpress Social Share Plugin powered by Ultimatelysocial