ನಟಿ ಮೇಘನಾ ರಾಜ್ ಮತ್ತೆ ಸಿನಿಮಾ ರಂಗದಲ್ಲಿ ಆಕ್ಟೀವ್ ಆಗಿದ್ದಾರೆ.

ಟಿ ಮೇಘನಾ ರಾಜ್ ಮತ್ತೆ ಸಿನಿಮಾ ರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ನಿಮ್ಮೊಂದಿಗೆ ವರ್ಷದ ಕನಸು ಹಂಚಿಕೊಳ್ಳಲಿದ್ದೇನೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು ಮೇಘನಾ ರಾಜ್ ನಿನ್ನೆ ಆ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದರು. ಅವರ ಕನಸಿಗೆ ಇಡೀ ಚಿತ್ರೋದ್ಯಮವೇ ಬೆಂಬಲವಾಗಿ ನಿಂತಿದೆ.

ನೂರಕ್ಕೂ ಅಧಿಕ ನಟ ನಟಿಯರಿಂದ ಏಕಕಾಲಕ್ಕೆ ಮೇಘನಾ ರಾಜ್ ನಟನೆಯ “ತತ್ಸಮ ತದ್ಭವ” ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

ನಟಿ ಮೇಘನಾ ರಾಜ್ ಸರ್ಜಾ ಬಹಳ ದಿನಗಳ ನಂತರ ಮತ್ತೆ ನಟನೆಗೆ ಮರಳಿರುವ ಚಿತ್ರ “ತತ್ಸಮ ತದ್ಭವ”ದ ಫಸ್ಟ್ ಲುಕ್ ಪೋಸ್ಟರ್ ಹೊರಬಂದಿದೆ. ನಿರ್ದೇಶಕ ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನೂತನ ಪ್ರತಿಭೆ ವಿಶಾಲ್ ಆತ್ರೇಯ ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದೆ.

ನಿನ್ನೆ (ಫೆ. 19) “ತತ್ಸಮ ತದ್ಭವ” ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ನೂರಕ್ಕೂ ಹೆಚ್ಚು ನಟನಟಿಯರು ತಮ್ಮ ಸಮಾಜಿಕ ಜಾಲತಾಣದಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲ. ಪ್ರಪಂಚದಾದ್ಯಂತ 30 ಕ್ಕೂ ಹೆಚ್ಚಿನ ದೇಶಗಳಲ್ಲಿರುವ ಕನ್ನಡ ಹಾಗೂ ಇತರ ಸಂಘಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಪ್ರೋತ್ಸಾಹ ನೀಡಿರುವುದು ಹೆಮ್ಮೆಯ ವಿಷಯವಾಗಿದೆ.

ಚಿತ್ರದ ಸುಮಧುರ ಹಾಡುಗಳಿಗೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಶ್ರೀನಿವಾಸ್ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಸಂಕಲನ, ನಿಖಿತ ಪ್ರಿಯ ವಸ್ತ್ರವಿನ್ಯಾಸ ಹಾಗೂ ಸಂತೋಷ್ ಪಂಚಾಲ್ ಕಲಾ ನಿರ್ದೇಶನವಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿವಸೇನಾ ವೆಬ್‌ಸೈಟ್‌ ಸ್ಥಗಿತ, ಟ್ವಿಟರ್ ಖಾತೆಯಲ್ಲಿ ಹೆಸರು ಬದಲಿಸಿದ ಠಾಕ್ರೆ ಬಣ.

Mon Feb 20 , 2023
‘ಬಿಲ್ಲು ಮತ್ತು ಬಾಣ’ದ  ಹೋರಾಟ ಈಗ ಸುಪ್ರೀಂ ಕೋರ್ಟ್‌  ಅಂಗಳ ತಲುಪಲಿದೆ. ಭಾರತೀಯ ಚುನಾವಣಾ ಆಯೋಗವು (ECI) ಮುಖ್ಯಮಂತ್ರಿ ಏಕನಾಥ್‌ ಶಿಂದೆ  ಬಣವನ್ನು ಅಧಿಕೃತ ಶಿವಸೇನಾ ಎಂದು ಗುರುತಿಸಿ, ಬಿಲ್ಲು ಬಾಣವನ್ನು ಪಕ್ಷದ ಚಿಹ್ನೆಯಾಗಿ ನಿಗದಿ ಪಡಿಸಿದೆ. ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಮಾಜಿ ಸಿಎಂ ಉದ್ಧವ್‌ ಠಾಕ್ರೆ  ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ.ಉದ್ಧವ್‌ ಠಾಕ್ರೆ ಅವರ ತಂದೆ ಬಾಳ್‌ ಠಾಕ್ರೆ ಅವರು 1966ರಲ್ಲಿ ಶಿವಸೇನಾ ಸ್ಥಾಪಿಸಿದರು. […]

Advertisement

Wordpress Social Share Plugin powered by Ultimatelysocial