ಸ್ಯಾಂಡಲ್ವುಡ್ ನಟಿ ಮೇಘನಾ ರಾಜ್ ಸರ್ಜಾ ಕೊನೆಗೂ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ನೀವೆಲ್ಲರೂ ಕೇಳುವ ಪ್ರಶ್ನೆಗೆ ಉತ್ತರ ನೀಡುವ ಸಮಯ ಬಂದಿದೆ ಎಂದು ಪೋಸ್ಟ್ ಮಾಡುವ ಮೂಲಕ ನಟಿ ಅಭಿಮಾನಿಗಳಿಗೆ ಕುತೂಹಲ ಕೆರಳಿಸಿದ್ದರು.
ಈಗ ಹೊಸ ಸಿನಿಮಾ ಅನೌನ್ಸ್ ಮಾಡುವ ಮೂಲಕ ಆ ಕುತೂಹಲಕ್ಕೆ ತೆರೆಬಿದ್ದಿದೆ.
ಕನ್ನಡದ ಪ್ರತಿಭಾನ್ವಿತ ನಟಿ ಮೇಘನಾ ರಾಜ್ ಅವರು ಪತಿ ಚಿರು ನಿಧನದ ನಂತರ ಸಾಕಷ್ಟು ನೋವು, ಸಂಕಷ್ಟಗಳನ್ನ ಎದುರಿಸಿದ್ದರು. ನಟಿಯ ಎರಡನೇ ಮದುವೆ ಬಗ್ಗೆ, ಸಿನಿಮಾಗೆ ಕಮ್ಬ್ಯಾಕ್ ಆಗುವ ಬಗ್ಗೆ ಹಲವು ಪ್ರಶ್ನೆಗಳನ್ನ ಮೇಘನಾಗೆ ಕೇಳುತ್ತಿದ್ದರು. (ಫೆ.18)ರಂದು ಶನಿವಾರ ಮೇಘನಾ ಸೋಷಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದರು. 2020, ಭಾನುವಾರವಾಗಿತ್ತು ನನ್ನ ವಿಚಾರದಲ್ಲಿ ತೀವ್ರವಾದ ಬದಲಾವಣೆಯಾದವು. ಆಗಿನಿಂದಲೂ ನನಗೆ ಒಂದು ಪ್ರಶ್ನೆಯನ್ನು ಕೇಳಲಾಗುತ್ತಿದೆ. ಫೆಬ್ರವರಿ 19ರ ಭಾನುವಾರ ನಾನು ಆ ಪ್ರಶ್ನೆಗೆ ಉತ್ತರ ಕೊಡ್ತೀನಿ. 2023ರ ಫೆಬ್ರವರಿ 19ರ ಬೆಳಗ್ಗೆ 10:35ಕ್ಕೆ ಎಂದು ಅಪ್ಡೇಟ್ ನೀಡಿದ್ದರು. ಆ ಕುತೂಹಲಕ್ಕೆ ಈಗ ತೆರೆಬಿದ್ದಿದೆ.
ಬಹುಭಾಷಾ ನಟಿ ಮೇಘನಾ ರಾಜ್ ಅವರು `ತತ್ಸಮ ತದ್ಭವ’ ಸಿನಿಮಾ ಮೂಲಕ ಮತ್ತೆ ನಟನೆಗೆ ಕಮ್ ಬ್ಯಾಕ್ ಆಗಿದ್ದಾರೆ. ಸ್ತ್ರೀ ಪ್ರಧಾನ ಪಾತ್ರದ ಮೂಲಕ ಬೆಳ್ಳಿಪರದೆಯಲ್ಲಿ ಮಿಂಚಲಿದ್ದಾರೆ. ಸದ್ಯ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನ ರಿಲೀಸ್ ಮಾಡುವ ಮೂಲಕ ಮೋಹಕತಾರೆ ರಮ್ಯಾ ಅವರು ಮೇಘನಾಗೆ ಸಾಥ್ ನೀಡಿದ್ದಾರೆ. ಜೊತೆಗೆ ಕಮ್ ಬ್ಯಾಕ್ಗೆ ಶುಭಹಾರೈಸಿದ್ದಾರೆ.
ವಿಶಾಲ್ ಅತ್ರೇಯಾ ನಿರ್ದೇಶನದ `ತತ್ಸಮ ತದ್ಭವ’ ಚಿತ್ರದಲ್ಲಿ ಮೇಘನಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೇಘನಾ ರಾಜ್ ಅವರ ಬಾಯಿಯನ್ನು ಬಲವಂತವಾಗಿ ಮುಚ್ಚಲಾಗಿದೆ. ಪೋಸ್ಟರ್ ಲುಕ್ ಕುತೂಹಲ ಕೆರಳಿಸಿದೆ. ಕನ್ನಡ ಮತ್ತು ಮಲಯಾಳಂನಲ್ಲಿ ಮೂಡಿ ಬಂದಿರುವ ಈ ಚಿತ್ರಕ್ಕೆ ಪನ್ನಗ ಭರಣ ಅವರು ಸಿನಿಮಾ ನಿರ್ಮಾಣ ಮಾಡಿದ್ದಾರೆ. ʻಕೆಆರ್ಜಿʼ ಸಂಸ್ಥೆ ಈ ಚಿತ್ರವನ್ನು ವರ್ಲ್ಡ್ ವೈಡ್ ರಿಲೀಸ್ ಮಾಡಲಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada