ಅಡಕೆ ಬೆಳೆಗೆ ಇನ್ನು ಮುಂದೆ ಭವಿಷ್ಯವಿಲ್ಲ

ಅಡಕೆ ಬೆಳೆಗೆ ಇನ್ನು ಮುಂದೆ ಭವಿಷ್ಯವಿಲ್ಲ. ಆದ್ದರಿಂದ ಈ ಬಗ್ಗೆ ಸರ್ಕಾರ ಜಾಗೃತಿ ಮೂಡಿಸುವುದು ಒಳ್ಳೆಯದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.ಅಡಕೆ ಬೆಳೆ ಬಗ್ಗೆ ಚರ್ಚೆ ನಡೆಯುವ ಹೊತ್ತಿನಲ್ಲಿ ಮಧ್ಯಪ್ರವೇಶಿಸಿದ ಸಚಿವರು, ಆಂಧ್ರಪ್ರದೇಶದಲ್ಲಿ 2 ಲಕ್ಷ ಹೆಕ್ಟೇರ್​ನಲ್ಲಿ ಅಡಕೆ ಹಾಕಲಾಗಿದೆ.ಬಯಲು ಸೀಮೆಯಲ್ಲಿ ಅಡಕೆ ಕೃಷಿ ವ್ಯಾಪಿಸಿಕೊಳ್ಳುತ್ತಿದೆ. ವರ್ಷದಲ್ಲಿ 1 ಕೋಟಿ ಅಡಕೆ ಸಸಿ ನರ್ಸರಿಗಳಲ್ಲಿ ಖಾಲಿಯಾಗಿವೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಇನ್ನು 5-10 ವರ್ಷದಲ್ಲಿ ಅಡಕೆ ಬೆಳೆಗಾರರು ಬೀದಿಗೆ ಬರುವ ಸಂಭವವಿದೆ ಎಂದು ಆತಂಕ ವ್ಯಕ್ತಪಡಿಸಿದರು.ಅಡಕೆಗೆ ಭಾರಿ ಬೆಲೆ ಬಂದಿದ್ದು ದೊಡ್ಡ ಸಮಸ್ಯೆಯಾಗಿದೆ. ಎಲ್ಲರೂ ಸಾಲಸೋಲ ಮಾಡಿಯಾದರೂ ಅಡಕೆ ಕೃಷಿಗೆ ಮುಂದಾಗುತ್ತಿದ್ದಾರೆ. ಆದರೆ, ಮುಂಬರುವ ದಿನಗಳಲ್ಲಿ ಅಡಕೆ ಕೃಷಿಕನ ಕೈ ಹಿಡಿಯದು. ಸರ್ಕಾರ ಈಗಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ನಿಯಮ 69 ಅಡಿಯಲ್ಲಿ ನಡೆಯುತ್ತಿದ್ದ ಚರ್ಚೆಯಲ್ಲಿ ಪಾಲ್ಗೊಂಡ ಶಾಸಕ ಎಚ್.ಡಿ. ರೇವಣ್ಣ, ನಾನು ಕೂಡ 40 ಎಕರೆಯಲ್ಲಿ ಅಡಕೆ ಹಾಕಿದ್ದೇನೆ ಎಂದದ್ದು ಚರ್ಚೆ ಇನ್ನಷ್ಟು ಕಾವೇರಲು ಕಾರಣವಾಯಿತು. ಕೇಂದ್ರ ಸರ್ಕಾರ ಅಡಕೆ ಆಮದನ್ನು ನಿಲ್ಲಿಸಬೇಕು ಎಂದು ಜೆಡಿಎಸ್​ನ ಅನ್ನದಾನಿ ಆಗ್ರಹಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಮದುವೆ ಬಗ್ಗೆ ರಾಹುಲ್ ಗಾಂಧಿ ಕುತೂಹಲಕಾರಿ ಪ್ರತಿಕ್ರಿಯೆ

Thu Dec 29 , 2022
ಭಾರತ್ ಜೋಡೋ ಯಾತ್ರೆ ಹೆಸರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸುದೀರ್ಘ ಪಾದಯಾತ್ರೆ ಮುಂದುವರೆದಿದೆ. ಯಾತ್ರೆ ದೆಹಲಿ ತಲುಪಿದ್ದು, ಯಾತ್ರೆಗೆ ತಾತ್ಕಾಲಿಕ ಬ್ರೇಕ್ ಬಿದ್ದ ಕಾರಣ ರಾಹುಲ್ ಯೂಟ್ಯೂಬ್ ಚಾನೆಲ್ ವೊಂದಕ್ಕೆ ಸಂದರ್ಶನ ನೀಡಿದ್ದಾರೆ.ಈ ಸಂದರ್ಭದಲ್ಲಿ ಎದುರಾಳಿಗಳ ಆರೋಪ, ಪಪ್ಪು ಎನ್ನುವ ಟೀಕೆಗಳಿಗೆ ಉತ್ತರಿಸಿದರು. ಮೇಲಾಗಿ.. ಎಂತಹ ಸಂಗಾತಿ ಬೇಕು ಎಂಬುದಕ್ಕೂ ರಾಹುಲ್ ಕ್ಲಾರಿಟಿ ನೀಡಿದ್ದಾರೆ.ವಿಪಕ್ಷಗಳು ನಿಮ್ಮನ್ನು ‘ಪಪ್ಪು’ ಎಂದು ಸಂಬೋಧಿಸುತ್ತಿದ್ದಾರೆ.. ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದಿದ್ದಕ್ಕೆ […]

Advertisement

Wordpress Social Share Plugin powered by Ultimatelysocial