ಗುರುವಾರ ಭುವನೇಶ್ವರದಿಂದ ಪುಣೆಗೆ ಹೊರಟಿದ್ದ ಏರ್ ಏಷ್ಯಾ ವಿಮಾನ(Air Asia flight) ಟೇಕ್ ಆಫ್ ಆದ ಕೆಲವೇ ಹೊತ್ತಿಗೆ ಹಕ್ಕಿ ಡಿಕ್ಕಿಯಾಗಿದ್ದು, ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.ವಿಮಾನ ಟೇಕ್ ಆಫ್ ಆದ ಕೂಡಲೇ ಪುಣೆಗೆ ತೆರಳುತ್ತಿದ್ದ ಏರ್ ಏಷ್ಯಾ ವಿಮಾನವು ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ವಿಮಾನವನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ ಎಂದು ಏರ್ ಅಥಾರಿಟಿ ಹೇಳಿಕೆಯಲ್ಲಿ ತಿಳಿಸಿದೆ.ಏರ್ ಏಷ್ಯಾ ಹೇಳಿಕೆಯಲ್ಲಿ, ‘ಭುವನೇಶ್ವರದಿಂದ ಪುಣೆಗೆ ಹಾರಾಟ ನಡೆಸುತ್ತಿದ್ದ ವಿಮಾನವು ಟೇಕ್ ಆಫ್ ಆದ ನಂತರ, ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನ ಭುವನೇಶ್ವರಕ್ಕೆ ಮರಳಿದೆ. ಪ್ರಯಾಣಿಕರು ಸೇಫ್ ಆಗಿದ್ದಾರೆ ಎಂದು ತಿಳಿಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada