ಅಲ್ಲು ಅರ್ಜುನ್ ಅಪ್ಪು ಸಮಾಧಿಗೆ ನಮನ: ಪುನೀತ್​ ನಿವಾಸಕ್ಕೆ ತೆರಳಿದ.

ಬೆಂಗಳೂರು: ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್​ ಗುರುವಾರ ಕಂಠೀರವ ಸ್ಟುಡಿಯೋಕ್ಕೆ ಭೇಟಿ ನೀಡಿ ಅಪ್ಪು ಸಮಾಧಿಗೆ ನಮಿಸಿದರು. ಇದಕ್ಕೂ ಅಪ್ಪು ನಿವಾಸಕ್ಕೆ ತೆರಳಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಸಾಂತ್ವನ ಹೇಳಿದರು. ಮನೆಯಲ್ಲಿದ್ದ ಅಪ್ಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಭಾವುಕರಾದರು.ನಟ ಶಿವರಾಜ್​ಕುಮಾರ್ ಅವರನ್ನ ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದರು.ಅಪ್ಪು ಸಮಾಧಿಗೆ ಪುಷ್ಪ ನಮನ ಸಲ್ಲಿಸುತ್ತಲೇ ಅಲ್ಲು ಅರ್ಜುನ್​ ಭಾವುಕರಾದರು. ಇವರ ಜತೆಗೆ ನಟ, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಕೂಡ ಇದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಲ್ಲು ಅರ್ಜುನ್​, ಪುನೀತ್​ ಇಲ್ಲ ಎಂಬ ವಿಷಯವನ್ನೇ ಅರಗಿಸಿಕೊಳ್ಳೋಕೆ ಆಗ್ತಿಲ್ಲ. ನಾನು ಬೆಂಗಳೂರಿಗೆ ಬಂದಾಗ ಅಪ್ಪು ಅವರನ್ನು ಭೇಟಿ ಮಾಡುತ್ತಿದ್ದೆ. ಅವರು ಹೈದರಾಬಾದ್​ಗೆ ಬಂದಾಗ ನನ್ನನ್ನು ಭೇಟಿ ಮಾಡುತ್ತಿದ್ದರು. ‘ಅಲಾ ವೈಕುಂಟಪುರಮುಲೋ’ ಸಿನಿಮಾ ಸಂದರ್ಭದಲ್ಲಿ ಅಪ್ಪು ನನಗೆ ಕರೆ ಮಾಡಿದ್ದರು. ‘ಬುಟ್ಟಾ ಬೊಮ್ಮ’ ಸಾಂಗ್ ಚೆನ್ನಾಗಿದೆ ಎಂದು ಹೇಳಿದ್ದರು. ಮತ್ತೆ ಇಬ್ಬರೂ ಭೇಟಿ ಆಗಬೇಕು ಅಂದುಕೊಂಡಿದ್ದೆವು. ಕರೊನಾ ಹಿನ್ನೆಲೆ ಸಾಧ್ಯವಾಗಲಿಲ್ಲ. ಅವರೀಗ ಬಾರದ ಲೋಕಕ್ಕೆ ಹೋಗಿಬಿಟ್ಟಿದ್ದಾರೆ ಎಂದು ಭಾವುಕರಾದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯುಪಿ 5 ವರ್ಷಗಳಲ್ಲಿ ಭಾರತದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿದೆ: ಯೋಗಿ ಆದಿತ್ಯನಾಥ್

Thu Feb 3 , 2022
ಲಕ್ನೋ, ಫೆಬ್ರವರಿ 03: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಐದು ವರ್ಷಗಳ ಅಧಿಕಾರಾವಧಿಯಲ್ಲಿ ತಮ್ಮ ಸರ್ಕಾರದ ಸಾಧನೆಗಳನ್ನು ಗುರುವಾರ ಪಟ್ಟಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಯುಪಿ ಸಿಎಂ, 2017 ರಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಂಡ ನಂತರ, ರಾಜ್ಯವು ಆರು ಮತ್ತು ಏಳನೇ ಸ್ಥಾನದಿಂದ ದೇಶದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿದೆ. “1947 ರಿಂದ 2017 ರವರೆಗಿನ ಯುಪಿ ಆರ್ಥಿಕತೆಯು 6, 7 ನೇ ಸ್ಥಾನದಲ್ಲಿತ್ತು (ದೇಶದಲ್ಲಿ). 70 […]

Advertisement

Wordpress Social Share Plugin powered by Ultimatelysocial