ಬೆಂಗಳೂರು: ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ ಗುರುವಾರ ಕಂಠೀರವ ಸ್ಟುಡಿಯೋಕ್ಕೆ ಭೇಟಿ ನೀಡಿ ಅಪ್ಪು ಸಮಾಧಿಗೆ ನಮಿಸಿದರು. ಇದಕ್ಕೂ ಅಪ್ಪು ನಿವಾಸಕ್ಕೆ ತೆರಳಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಸಾಂತ್ವನ ಹೇಳಿದರು. ಮನೆಯಲ್ಲಿದ್ದ ಅಪ್ಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಭಾವುಕರಾದರು.ನಟ ಶಿವರಾಜ್ಕುಮಾರ್ ಅವರನ್ನ ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದರು.ಅಪ್ಪು ಸಮಾಧಿಗೆ ಪುಷ್ಪ ನಮನ ಸಲ್ಲಿಸುತ್ತಲೇ ಅಲ್ಲು ಅರ್ಜುನ್ ಭಾವುಕರಾದರು. ಇವರ ಜತೆಗೆ ನಟ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಕೂಡ ಇದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಲ್ಲು ಅರ್ಜುನ್, ಪುನೀತ್ ಇಲ್ಲ ಎಂಬ ವಿಷಯವನ್ನೇ ಅರಗಿಸಿಕೊಳ್ಳೋಕೆ ಆಗ್ತಿಲ್ಲ. ನಾನು ಬೆಂಗಳೂರಿಗೆ ಬಂದಾಗ ಅಪ್ಪು ಅವರನ್ನು ಭೇಟಿ ಮಾಡುತ್ತಿದ್ದೆ. ಅವರು ಹೈದರಾಬಾದ್ಗೆ ಬಂದಾಗ ನನ್ನನ್ನು ಭೇಟಿ ಮಾಡುತ್ತಿದ್ದರು. ‘ಅಲಾ ವೈಕುಂಟಪುರಮುಲೋ’ ಸಿನಿಮಾ ಸಂದರ್ಭದಲ್ಲಿ ಅಪ್ಪು ನನಗೆ ಕರೆ ಮಾಡಿದ್ದರು. ‘ಬುಟ್ಟಾ ಬೊಮ್ಮ’ ಸಾಂಗ್ ಚೆನ್ನಾಗಿದೆ ಎಂದು ಹೇಳಿದ್ದರು. ಮತ್ತೆ ಇಬ್ಬರೂ ಭೇಟಿ ಆಗಬೇಕು ಅಂದುಕೊಂಡಿದ್ದೆವು. ಕರೊನಾ ಹಿನ್ನೆಲೆ ಸಾಧ್ಯವಾಗಲಿಲ್ಲ. ಅವರೀಗ ಬಾರದ ಲೋಕಕ್ಕೆ ಹೋಗಿಬಿಟ್ಟಿದ್ದಾರೆ ಎಂದು ಭಾವುಕರಾದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada