ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2′ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ನಡುವೆ ಈ ಸಿನಿಮಾಗೆ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಶುಭ ಕೋರಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಲ್ಲು ಅರ್ಜುನ್, ನಾಳೆಯಿಂದ ಕರ್ನಾಟಕದಲ್ಲಿ ಭಜರಂಗಿ 2 ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದಿದ್ದಾರೆ.
ಕನ್ನಡ ಸಿನಿಮಾಗೆ ಅಲ್ಲು ಅರ್ಜುನ್ ಶುಭ ಹಾರೈಸಿರುವುದು ಶಿವಣ್ಣನ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸದ್ಯಕ್ಕೆ ಅಲ್ಲು ಅರ್ಜುನ್ ‘ಪುಷ್ಪ’ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.
ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :
https://play.google.com/store/apps/details?id=com.speed.newskannada