ಪೋಷಕಾಂಶಗಳ ಆಗರ ʼಬಾದಾಮಿʼ ಮಕ್ಕಳಿಗೆ ಕೊಡಿ

ಇಂದಿನ ಒತ್ತಡದ ಯುಗದಲ್ಲಿ ಅರೋಗ್ಯದ ಕಡೆಗೆ ಗಮನ ಕೊಡುವುದು ಬಹಳ ಮುಖ್ಯ ಎಂಬುದು ಬಹುತೇಕರಿಗೆ ಮರೆತೇ ಹೋಗಿರುತ್ತದೆ. ಬಾಯಿಗೆ ರುಚಿಯಾಗುವ ವಸ್ತುಗಳನ್ನು ಸೇವಿಸುವ ಬದಲು ಅರೋಗ್ಯಕ್ಕೆ ಯಾವುದು ಉತ್ತಮವೋ ಅದನ್ನು ತಿನ್ನುವುದು ಬಹಳ ಮುಖ್ಯ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.ಇತ್ತೀಚೆಗೆ ಮಕ್ಕಳು ಸೇವಿಸುವ ಆಹಾರದಲ್ಲಿ ದೇಹಕ್ಕೆ ಬೇಕಾಗುವಷ್ಟು ಪ್ರೊಟೀನ್ ಹಾಗೂ ವಿಟಮಿನ್ ಗಳು ಇರುವುದಿಲ್ಲ. ಮಕ್ಕಳ ಬಾಯಿಗೆ ಇಷ್ಟವಾಗುವ ಕುರುಕುಲು ತಿಂಡಿಗಳ ಜೊತೆ ಹಣ್ಣು ತರಕಾರಿ, ಮಾಂಸ, ಮೊಟ್ಟೆ, ಸೊಪ್ಪು ಹಾಗೂ ಒಣಹಣ್ಣುಗಳನ್ನು ತಿನ್ನಲು ಕೊಡಬೇಕು.ಅತ್ಯಧಿಕ ಪೋಷಕಾಂಶ ಮತ್ತು ವಿಟಮಿನ್ ಇರುವ ಬಾದಾಮಿಯನ್ನು ನಿತ್ಯ ಮಕ್ಕಳಿಗೆ ತಿನ್ನಲು ಕೊಡಿ. ಅತಿ ಹೆಚ್ಚು ಪ್ರಮಾಣದ ಪೌಷ್ಟಿಕಾಂಶಗಳನ್ನು ಇದು ಪೂರೈಸುತ್ತದೆ. ಕೊಬ್ಬಿನ ಪ್ರಮಾಣ ಇದರಲ್ಲಿ ಕಡಿಮೆ ಇರುವುದರಿಂದ ಹಸಿಯಾಗಿಯೇ ಸೇವಿಸಬೇಕು.ಪ್ರತಿನಿತ್ಯ ಒಂದು ಬಾದಾಮಿ ಸೇವಿಸುವುದರಿಂದ ಮಕ್ಕಳ ಮೆದುಳು ಆರೋಗ್ಯಕರವಾಗಿ ಕೆಲಸ ಮಾಡುತ್ತದೆ. ಮಲಬದ್ಧತೆ ನಿವಾರಣೆಯಾಗುತ್ತದೆ. ಹೀಗಾಗಿ ನಿತ್ಯ ಮಕ್ಕಳಿಗೆ ಬಾದಾಮಿ ತಿನ್ನಿಸಿ. ಆದರೆ ನೆನಪಿರಲಿ, ಒಂದು ಅಥವಾ ಎರಡಕ್ಕಿಂತ ಹೆಚ್ಚು ಬೇಡ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ಭಕ್ತಾದಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

Wed Feb 2 , 2022
ಮಂಗಳೂರು: ಕುಕ್ಕೆ ಸುಬ್ರಮಣ್ಯದಲ್ಲಿ ಕೋವಿಡ್‌ನಿಂದ ಹೇರಲಾಗಿದ್ದ ಸೇವೆಗಳ ನಿರ್ಬಂಧ ತೆರವು ಮಾಡಲಾಗಿದ್ದು, ಈ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ಉಲ್ಲೇಖ ಮಾಡಲಾಗಿದೆ.ಹೌದು, ರಾಜ್ಯದಲ್ಲಿ ಇದೀಗ ಸೋಂಕು ತಗ್ಗಿದ ಹಿನ್ನೆಲೆ ದೇವಾಲಯದಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ತೆಗೆಯಲಾಗಿದೆ.ಇದೇ ವೇಳೆ ಆದೇಶ ಪತ್ರದಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಈ ಹಿಂದಿನಂತೆ, ಭಕ್ತಾದಿಗಳು ಸೇವೆಗಳನ್ನು ನೇರವೇರಿಸಲು ಅವಕಾಶ ಮಾಡಿಕೊಡಲಾಗಿದೆ ಅಂತ ಹೇಳಿದೆ. ಆದೇಶದಲ್ಲಿ ಇರೋದು ಏನು? ರಾಜ್ಯ ಸರ್ಕಾರದ ನಡವಳಿ ಸಂಖ್ಯೆ ಆರ್. […]

Advertisement

Wordpress Social Share Plugin powered by Ultimatelysocial