ಆಮ್ ಆದ್ಮಿ ಪಕ್ಷಕ್ಕೆ ವಕೀಲ ಜಗದೀಶ್ ರಾಜೀನಾಮೆ

 

ಬೆಂಗಳೂರು, ಮಾರ್ಚ್ 24: ಕೆಲವು ತಿಂಗಳುಗಳ ಹಿಂದೆಯಷ್ಟೇ ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದ ವಕೀಲ ಜಗದೀಶ್ ಕೆ.ಎನ್. ಇಂದು (ಗುರುವಾರ) ಪಕ್ಷಕ್ಕೆ ದಿಢೀರ್ ಆಗಿ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ವಕೀಲ ಜಗದೀಶ್ ಕೆ.ಎನ್, “ಆಮ್ ಆದ್ಮಿ ಪಕ್ಷಕ್ಕೆ ಸೇರಿ ಪಕ್ಷ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ.

ಇಂದು ಅಧಿಕೃತವಾಗಿ ಆಮ್ ಆದ್ಮಿ ಪಕ್ಷ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಕರ್ನಾಟಕ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿಯವರಿಗೆ ತಲುಪಿಸಿದ್ದೇನೆ,” ಎಂದರು.

 

“ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳಿಗೂ ಈ ವಿಷಯ ಹೇಳುತ್ತಿದ್ದೇನೆ. ನನ್ನ ರಾಜೀನಾಮೆ ತಕ್ಷಣದಿಂದ ಕಾರ್ಯರೂಪಕ್ಕೆ ಬರಲಿದ್ದು, ಇನ್ಮುಂದೆ ನನಗೂ, ಆದ್ಮಿ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ,” ಎಂದು ವಿಡಿಯೋ ಹೇಳಿಕೆಯಲ್ಲಿ ವಕೀಲ ಜಗದೀಶ್ ಕೆ.ಎನ್ ತಿಳಿಸಿದ್ದಾರೆ.

ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಸಂದರ್ಭದಲ್ಲಿ “ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್‌ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ,” ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್‌. ಜಗದೀಶ್ ಮಹಾದೇವ್ ಹೇಳಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸೊಸೆ ಸೋನಮ್ ಕಪೂರ್ ಗರ್ಭಾವಸ್ಥೆಯ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದ್ದ, ಸಂಜಯ್ ಕಪೂರ್!

Thu Mar 24 , 2022
  ಸೋನಮ್ ಕಪೂರ್ ಇತ್ತೀಚೆಗೆ ತನ್ನ ಪತಿ ಆನಂದ್ ಅಹುಜಾ ಅವರೊಂದಿಗೆ ತನ್ನ ಮೊದಲ ಮಗುವನ್ನು ನಿರೀಕ್ಷಿಸುತ್ತಿರುವುದಾಗಿ ಘೋಷಿಸಿದಾಗ ತನ್ನ ಅಭಿಮಾನಿಗಳಿಗೆ ಅತೀವ ಸಂತೋಷವನ್ನುಂಟುಮಾಡಿದರು. ನಟಿ ನಾಲ್ಕು ತಿಂಗಳ ಗರ್ಭಿಣಿ ಎಂದು ವರದಿಯಾಗಿದೆ. ಈ ಸಂತಸದ ಸುದ್ದಿಯನ್ನು ಸೋನಂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕೂಡಲೇ ಪೋಷಕರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರಲಾರಂಭಿಸಿದೆ. ಸೋನಮ್ ಅವರ ಚಿಕ್ಕಪ್ಪ ಮತ್ತು ನಟ ಸಂಜಯ್ ಕಪೂರ್ ಅವರನ್ನು ತಲುಪಿತು. ತನ್ನ ಸಂತೋಷವನ್ನು ವ್ಯಕ್ತಪಡಿಸಿದ ಅವರು […]

Advertisement

Wordpress Social Share Plugin powered by Ultimatelysocial