ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಿಗೆ ಪುನರ್ ನಾಮಕರಣ ಮಾಡಲಾಗಿದೆ. ಇನ್ನು ಈ ಬಗ್ಗೆ ಸರ್ಕಾರದಿಂದ ಆದೇಶ ಕೂಡ ಹೊರಡಿಸಲಾಗಿದೆ.ಪರಿಶಿಷ್ಟ ಜಾತಿಯ ಮಕ್ಕಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಒಂದರಿಂದ ಐದನೇ ತರಗತಿವರೆಗೆ ಶಿಕ್ಷಣ ನೀಡಲು 68 ವಸತಿ ಶಾಲೆಗಳನ್ನು ತೆರೆಯಲಾಗಿದೆ. ಇನ್ನು ಈ ಶಾಲೆಯಲ್ಲಿ ೮೫೦೦ ವಿದ್ಯಾರ್ಥಿಗಳು ವ್ಯಾಸಂಘ ಮಾಡುತ್ತಿದ್ದು, ಇವರೆಲ್ಲರು ಓದುತ್ತಿರುವ ಶಾಲೆಗೆ ಅಂಬೇಡ್ಕರ್ ಹೆಸರನ್ನು ನಾಮಕರಣ ಮಾಡಲಾಗಿದೆ. ಅಂಬೇಡ್ಕರ್ ಅವರ ಹೋರಾಟ, ಹಾಗು ಇವರು ದೇಶಕ್ಕಾಗಿ ಮಾಡಿದ ತ್ಯಾಗ , ಅವರು ಜನಕ್ಕಾಗಿ ನೀಡಿದ ಕೊಡುಗೆಯ ಹಿನ್ನೆಲೆಯಲ್ಲಿ ಭಾರತರತ್ನ ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಎಂದು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಿಗೆ ಪುನರ್ ನಾಮಕರಣ ಮಾಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada