ಬೆಳಗಾವಿ ಅತ್ಯಂತ ದೊಡ್ಡ ಜಿಲ್ಲೆಯಾಗಿದ್ದು, ಮೂರು ಜಿಲ್ಲೆಯಾಗುವಷ್ಟು ವಿಸ್ತಾರವಾಗಿದೆ ಎಂದು ನಮ್ಮ ಒತ್ತಾಯವಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು ಇದೇ ವೇಳೆ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ್ ವಿರುದ್ಧವೂ ವಾಗ್ದಾಳಿ ನಡೆಸಿದರು. ಅವರ ಪ್ರಾಬಲ್ಯ ಬಹಳ ಇದ್ದು, ಜನರಿಗೆ ಸುಖಾ ಸುಮ್ಮನೆ ತೊಂದರೆ ಕೊಡುತ್ತಿದ್ದಾರೆ. ಇದನ್ನು ನೋಡಿ ಸುಮ್ಮನೇ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಗೋಕಾಕ್ ನಲ್ಲಿ ಕತ್ತೆಗೆ ಲತ್ತೆ ಪೆಟ್ಟು ಎಂದು ಆಗಾಗ ಎಚ್ಚರಿಸುತ್ತಿರಬೇಕು. ಇಲ್ಲದಿದ್ದರೆ ಅಂಬಿರಾವ್ ಬೆಂಬಲಿಗರು ಜನರನ್ನು ಹೆದರಿಸುವುದು ಬೆದರಿಸುವುದು ಮಾಡುತ್ತಾರೆ. ಇನ್ನು ಮುಂದೆ ನಾನು ಜನರ ಪರವಾಗಿ ನಿಂತು ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇನೆ ಎಂದರು.