2023ರ ವಿಧಾನಸಭೆ ಚುನಾವಣೆಗೆ ಸಮಯ ಸನ್ನಿಹಿತವಾಗುತ್ತಿದೆ. ಚುನಾವಣೆಯ ಮೂಡ್ ಗೆ ಈಗಾಗಲೇ ಪ್ರಮುಖ ಪಕ್ಷಗಳು ಸಿದ್ಧವಾಗುತ್ತಿವೆ. ಈ ಹೊತ್ತಿನಲ್ಲಿ ಕಳೆದ ರಾತ್ರಿ ಬಿಜೆಪಿಯ ಚಾಣಾಕ್ಷ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ಹಳೆ ಮೈಸೂರು ಭಾಗದಲ್ಲಿ ಪುಷ್ಠಿ ನೀಡಬೇಕಿದೆ. ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಸಮಯ ಸನ್ನಿಹಿತವಾಗುತ್ತಿದೆ. ಚುನಾವಣೆಯ ಮೂಡ್ ಗೆ ಈಗಾಗಲೇ ಪ್ರಮುಖ ಪಕ್ಷಗಳು ಸಿದ್ಧವಾಗುತ್ತಿವೆ. ಈ ಹೊತ್ತಿನಲ್ಲಿ ಕಳೆದ ರಾತ್ರಿ ಬಿಜೆಪಿಯ ಚಾಣಾಕ್ಷ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ಹಳೆ ಮೈಸೂರು ಭಾಗದಲ್ಲಿ ಪುಷ್ಠಿ ನೀಡಬೇಕಿದೆ.ನಾಳೆ ಮಂಡ್ಯದಲ್ಲಿ ಅಮಿತ್ ಶಾ ಅವರು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಮಿತ್ ಶಾ ಅವರು ಬಿಜೆಪಿಯ ಸ್ಟಾರ್ ಪ್ರಚಾರಕ. ನಾಳೆ ಮಂಡ್ಯದಲ್ಲಿ ಅವರು ಭಾಷಣ ಮಾಡುವಾಗ ಬಿಜೆಪಿಯ ಸಾಧನೆಯ ರಿಪೋರ್ಟ್ ಕಾರ್ಡುಗಳನ್ನು ಜನತೆಯ ಮುಂದಿಡುವ ಸಾಧ್ಯತೆಗಳಿವೆ. ಇಂದು ಐಟಿ ರಾಜಧಾನಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು, ನಂತರ ಸಕ್ಕರೆ ನಾಡು ಮಂಡ್ಯದಲ್ಲಿ ಅಮಿತ್ ಶಾ ಅವರು ಸಂಚರಿಸಲಿದ್ದಾರೆ.ವಿಧಾನಸಭೆ ಚುನಾವಣೆಗೆ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ, ರಾಜ್ಯ ನಾಯಕರಿಗೆ ಉತ್ತೇಜನ ನೀಡಲಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಚೆಕ್ ಮೇಟ್ ಕೊಡುವುದು ಅಮಿತ್ ಶಾ ಪ್ರವಾಸದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ. ಮಂಡ್ಯದಲ್ಲಿ ಸ್ವತಂತ್ರ ಸಂಸದೆಯಾಗಿ ಸುಮಲತಾ ಅಂಬರೀಷ್ ಕೂಡ ಇದ್ದಾರೆ. ಅವರನ್ನು ಸಹ ಬಿಜೆಪಿಗೆ ಸೆಳೆಯುವ ಸಾಧ್ಯತೆ ಹೆಚ್ಚಾಗಿದೆ.ಹೈದರ್ ಆಲಿ ಮತ್ತು ಟಿಪ್ಪು ಸುಲ್ತಾನ್ ಆಳ್ವಿಕೆ ಕಾಲದಲ್ಲಿ ಮೈಸೂರಿನ ಹಿಂದಿನ ರಾಜಧಾನಿ ಶ್ರೀರಂಗಪಟ್ಟಣದಲ್ಲಿ ಇತ್ತೀಚೆಗೆ ಕೋಮುದಳ್ಳುರಿ ಹೆಚ್ಚಾಗಿದೆ. ಇಲ್ಲಿನ ಜಮಿಯಾ ಮಸೀದಿಯಲ್ಲಿ ಹಿಂದೂ ಸಂಘಟನೆಗಳು ತಮಗೆ ಪೂಜೆ ಮಾಡುವ ಹಕ್ಕನ್ನು ಕೇಳುತ್ತಿದ್ದಾರೆ. ಇದು ಮುಂದಿನ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಬಹುದು ಎಂಬ ಲೆಕ್ಕಾಚಾರ ಕೂಡ ಇದೆ. ಅಮಿತ್ ಶಾ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಮಂಡ್ಯ, ಮೈಸೂರು ಭಾಗಗಳಲ್ಲಿ ಹಾಕಲಾಗಿರುವ ಫ್ಲೆಕ್ಸ್, ಬ್ಯಾನರ್ , ಕಟೌಟ್ ಗಳಲ್ಲಿ ಸಂಸದೆ ಸುಮಲತಾ ಫೋಟೋಗಳು ರಾರಾಜಿಸುತ್ತಿವೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us: