ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ಸ್ಥಳೀಯ ನಾಯಕರ ದಂಡು ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಕೆಲವೇ ಕ್ಷಣಗಳಲ್ಲಿ ಹುಬ್ಬಳ್ಳಿಗೆ ಅಮೀತ್ ಶಾ ಬಂದಿಳಿಯಲಿದ್ದಾರೆ. ವಿಶೇಷ ವಿಮಾನದ ಮೂಲಕ ಚುನಾವಣಾ ಚಾಣಕ್ಯ ಆಗಮಿಸಲಿದ್ದು, ಅಮೀತ್ ಶಾ ಆಗಮನದ ಹಿನ್ನೆಲೆ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಸುತ್ತ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.ಇನ್ನೂ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಚಾಣಕ್ಯ, ಬಳ್ಳಾರಿ ಜಿಲ್ಲೆಯ ಸಂಡೂರು ಕಾರ್ಯಕ್ರಮದ ಹಿನ್ನಲೆ ಅಮೀತ್ ಶಾ ಆಗಮಿಸಿದ್ದಾರೆ. ಹುಬ್ಬಳ್ಳಿಗೆ ಬಂದಿಳಿದು ನಂತರ ಹೆಲಿಕಾಪ್ಟರ್ ಮೂಲಕ ಸಂಡೂರಿಗೆ ತೆರಳಲಿರೋ ಅಮೀತ್ ಶಾ. ಅಮೀತ್ ಶಾ ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಜಗದೀಶ ಶೆಟ್ಟರ್, ಅರವಿಂದ ಬೆಲ್ಲದ್ ಹಾಗೂ ಹಲವು ಗಣ್ಯರು ಆಗಮಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada